17 ವರ್ಷಗಳ ಬಳಿಕ ವಿಶ್ವಕಪ್ (T20 World Cup) ಗೆದ್ದ ಟೀಂ ಇಂಡಿಯಾಗೆ ತವರಿನಲ್ಲಿ ಭರ್ಜರಿ ಸ್ವಾಗತ ನೀಡಲು ತಯಾರಿಗಳು ನಡೆದಿವೆ. ಆದ್ರೆ, ಅಭಿಮಾನಿಗಳ ಆಸೆಗೆ ಬಾರ್ಬಡೋಸ್ಗೆ ಅಪ್ಪಳಿಸಿದ ಭೀಕರ ಚಂಡಮಾರುತ ತಣ್ಣೀರು ಎರಚಿದೆ. ಹಾಗಾಗಿ ಟೀಂ ಇಂಡಿಯಾ ತವರಿನಲ್ಲಿ ವಿಜಯೋತ್ಸವ ಆಚರಿಸಲು ಇನ್ನೂ ಮೂರ್ನಾಲ್ಕು ದಿನ ಕಾಯಬೇಕಿದೆ
Rahul Dravid: ರಾಹುಲ್ ದ್ರಾವಿಡ್ʼರವರ ವಿದಾಯದ ಭಾಷಣದ ಹೈಲೆಟ್ಸ್ ನೋಡೋಣ!
ಕೆರೀಬಿಯನ್ ದ್ವೀಪಗಳಲ್ಲಿ ಸೋಮವಾರ (ಜು.1) ಬೆಳಗ್ಗಿನ ಜಾವದಲ್ಲಿ ಕೆಟಗಿರಿ-4 ಚಂಡಮಾರುತ ಬೀಸುತ್ತಿರುವುದರಿಂದ ವಿಮಾನಯಾನವೂ ಸೇರಿದಂತೆ ಎಲ್ಲ ನಾಗರಿಕ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಮುಖ್ಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಸದ್ಯಕ್ಕೆ ಸೇವೆ ಸ್ಥಗಿತಗೊಳಿಸಲಾಗಿದೆ.
ಬಾರ್ಬಡೋಸ್ (Barbados) ಮತ್ತು ಸುತ್ತಮುತ್ತಲಿನ ದ್ವೀಪಗಳಲ್ಲಿ ಬಿರುಗಾಳಿಯ ತೀವ್ರತೆಯೂ ಹೆಚ್ಚಾಗಿದ್ದು, ಅಪಾಯಮಟ್ಟದಲ್ಲಿದೆ. 3 ಲಕ್ಷ ಜನಸಂಖ್ಯೆ ಹೊಂದಿರುವ ದ್ವೀಪದಲ್ಲಿ ಭಾನುವಾರ ಸಂಜೆಯಿಂದಲೇ ಲಾಕ್ಡೌನ್ ವಿಧಿಸಲಾಗಿದೆ. ಹೀಗಾಗಿ ಟೀಂ ಇಂಡಿಯಾ ಆಟಗಾರರು ಬಾರ್ಬಡೋಸ್ನ ಹೋಟೆಲ್ಗೆ ಸೀಮಿತ ಆಗಿದ್ದಾರೆ. ಅವರು ಸ್ವದೇಶಕ್ಕೆ ವಾಪಸ್ ಆಗೋದು ಇನ್ನೂ ಮೂರು ದಿನ ತಡವಾಗಬಹುದು ಎಂದು ಹೇಳಲಾಗಿದೆ.