ಬೆಂಗಳೂರು: ನೂತನ ಕ್ರಿಮಿನಲ್ ಕಾನೂನುಗಳಿಗೆ ತಿದ್ದುಪಡಿ ತರುವ ಮೂಲಕ ಕಾಂಗ್ರೆಸ್ ಸರ್ಕಾರ ಸಾರ್ವಜನಿಕರ ದಿಕ್ಕು ತಪ್ಪಿಸಲು ಹೊರಟಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಆರೋಪಿಸಿದ್ದಾರೆ.
ಪರಿಸರ ಸಂರಕ್ಷಣೆ ಮಾಡುವಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳಬೇಕು: ಸಿಎಂ ಸಿದ್ದರಾಮಯ್ಯ!
ಈ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅಶೋಕ, ಸದನದ ದಿಕ್ಕು ತಪ್ಪಿಸುವ ನಿಮ್ಮ ಯಾವ ಕುತಂತ್ರಗಳು ನಡೆಯುವುದಿಲ್ಲ. ಸದನದಲ್ಲಿ ಉತ್ತರಿಸಲು ತಯಾರಾಗಿ ಎಂದು ಸವಾಲು ಹಾಕಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಪೆಟ್ರೋಲ್, ಡೀಸೆಲ್, ಹಾಲಿನ ಬೆಲೆ ಏರಿಕೆ, ಕಾಂಗ್ರೆಸ್ ಪಕ್ಷದ ಆಂತರಿಕ ಕಚ್ಚಾಟ ಇವುಗಳಿಂದ ವಿಧಾನಸಭಾ ಅಧಿವೇಶನದಲ್ಲಿ ಇಕ್ಕಟ್ಟಿಗೆ ಸಿಲುಕಬೇಕಾಗುತ್ತದೆ ಎನ್ನುವ ಭಯದಿಂದ ಹೊಸ ನಾಟಕ ಶುರು ಮಾಡಿರುವ ಈ ನಿರ್ಲಜ್ಜ ಕಾಂಗ್ರೆಸ್ ಸರ್ಕಾರ, ನೂತನ ಕ್ರಿಮಿನಲ್ ಕಾನೂನುಗಳಿಗೆ ತಿದ್ದುಪಡಿ ತರುವ ಮೂಲಕ ಸಾರ್ವಜನಿಕರ ದಿಕ್ಕು ತಪ್ಪಿಸಲು ಹೊರಟಿದೆ’ ಎಂದು ಆರೋಪಿಸಿದ್ದಾರೆ.