ಗದಗ:– ಶಿಕ್ಷಕಿಯೋರ್ವರು ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದಿರುವ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಕಾಲಕಾಲೇಶ್ವರದಲ್ಲಿ ಜರುಗಿದೆ.
ಪ್ರೇಮಿಗಳ ಮೇಲೆ ನೈತಿಕ ಪೊಲೀಸ್ಗಿರಿ.. ಶಿವಮೊಗ್ಗದಲ್ಲಿ ಸ್ಥಳೀಯ ಯುವಕರಿಂದ ಹಲ್ಲೆ!
ಕಾಲಕಾಲೇಶ್ವರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ರೇಣುಕಾ ರಿಂದ ಈ ಕೃತ್ಯ ನಡೆದಿದೆ. ಹೀಗಾಗಿ ಶಾಲೆಗೆ ಬೀಗಾಹಾಕಿ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳು ತರಗತಿ ಬಹಿಷ್ಕಾರಿಸಿದ್ದಾರೆ.
ತಕ್ಷಣ ಶಿಕ್ಷಕಿಯನ್ನ ಅಮಾನತು ಮಾಡಬೇಕು. ಇಲ್ಲಾಂದ್ರೆ ಬೇರೆ ಶಾಲೆಗೆ ವರ್ಗಾವಣೆ ಮಾಡಬೇಕು. ಸಾಕಷ್ಟು ಬಾರಿ BEO ಗಮನಕ್ಕೆ ತಂದ್ರು ಡೋಂಟ್ ಕೇರ್ ಎಂದಿದ್ದು, ಸ್ಥಳಕ್ಕೆ ಸ್ಥಳಕ್ಕೆ DDPI ಬರುವಂತೆ ಪೋಷಕರು ಪಟ್ಟು ಹಿಡಿದಿದ್ದಾರೆ