ಬೆಂಗಳೂರು: ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಸೆಕ್ಯುರಿಟಿ ಗಾರ್ಡ್ ಒಳಗೆ ಬಿಟ್ಟಿಲ್ಲವೆಂದು ವಿದ್ಯಾರ್ಥಿಯೋರ್ವ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ನಡೆದಿದೆ.
ಜೈ ಕಿಶೋರ್ ರಾಯ್ ಮೃತ ಸೆಕ್ಯುರಿಟಿ ಗಾರ್ಡ್ ಆಗಿದ್ದು. ಭಾರ್ಗವ್ ಎನ್ನುವ ವಿದ್ಯಾರ್ಥಿ ಈ ಕೃತ್ಯ ಎಸಗಿದ್ದು ಅಲ್ಲದೇ ರಕ್ತ ಸ್ರಾವ ತಾಳಲಾರದೆ ಅಲ್ಲೇ ಮೃತಪಟ್ಟಿದ್ದಾನೆ.
ಪ್ರೇಮಿಗಳ ಆತ್ಮಹತ್ಯೆಗೆ ಹೊಸ ಟ್ವಿಸ್ಟ್: ಮದುವೆಯಾಗಿದ್ರೂ ಮತ್ತೋರ್ವ ಯುವತಿ ಜೊತೆ ಲವ್ವಿಡವ್ವಿ!
ಸೆಕ್ಯುರಿಟಿ ಗಾರ್ಡ್, ವಿದ್ಯಾರ್ಥಿಯನ್ನು ಕಾಲೇಜಿನ ಒಳಗೆ ಬಿಟ್ಟಿಲ್ಲ. ಹೀಗಾಗಿ ಕೋಪಗೊಂಡ ವಿದ್ಯಾರ್ಥಿ ಸೆಕ್ಯುರಿಟಿ ಮೇಲೆ ಹಲ್ಲೆ ನಡೆಸಿ ಚಾಕು ತೆಗೆದುಕೊಂಡು ಇರಿದಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಸೆಕ್ಯುರಿಟಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಸದ್ಯ ಸ್ಥಳಕ್ಕೆ ಅಮೃತಹಳ್ಳಿ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿ ಕಾಲೇಜಿಗೆ ಮದ್ಯಪಾನ ಮಾಡಿ ಬಂದಿರುವ ಶಂಕೆ ವ್ಯಕ್ತವಾಗಿದ್ದು ಅಮೃತಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.