ಭುವನೇಶ್ವರ: ಖಾಸಗಿ ಕಾನೂನು ಕಾಲೇಜಿನ ಸಹಾಯಕ ಪ್ರಾಧ್ಯಾಪಕನನ್ನು ಇಂದು ತನ್ನ ತಂದೆಯನ್ನು ಕೊಲೆ ಮಾಡಿದ ಆತಂಕಕಾರಿ ಘಟನೆಯೊಂದು ನಡೆದಿದ್ದು, ಬಂಧಿಸಲಾಗಿದೆ.
ಸಾವನ್ನಪ್ಪಿರುವ ಸೆಂಟ್ರಲ್ ಪಿಎಸ್ಯು ನಾಲ್ಕೊದ ನಿವೃತ್ತ ಅಧಿಕಾರಿಯಾಗಿದ್ದ ಸುನಿಲ್ ಚೌಧರಿಗೆ ಅವರ ಮಗ ಅನಿರುದ್ಧ್ ಚೌಧರಿ ಚಾಕುವಿನಿಂದ ಎದೆ ಮತ್ತು ಹೊಟ್ಟೆಗೆ ಅನೇಕ ಬಾರಿ ಇರಿದಿದ್ದಾರೆ. ಆರೋಪಿ ಅನಿರುದ್ಧ್ ಚೌಧರಿ ತನ್ನ ಪತ್ನಿಯೊಂದಿಗಿನ ಜಗಳದ ಹಿನ್ನೆಲೆಯಲ್ಲಿ ಮಂಚೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಕಲಹಂಗಾ ಪ್ರದೇಶದ ಅಪಾರ್ಟ್ಮೆಂಟ್ನಲ್ಲಿ ಪೋಷಕರೊಂದಿಗೆ ವಾಸಿಸುತ್ತಿದ್ದ. ಈ ವೇಳೆ ಆತ ತಂದೆಗೆ ಇರಿದಿದ್ದಾನೆ. ಇಂದು ಬೆಳಗ್ಗೆ ತಾಯಿ ಸುನೀತಾ ಅವರ ಸಮ್ಮುಖದಲ್ಲಿ ನಡೆದ ದಾರುಣ ಘಟನೆ ಇದಾಗಿದೆ. ಹಣಕಾಸಿನ ವಿವಾದಗಳು ಜಗಳಕ್ಕೆ ಕಾರಣವಾಯಿತು ಎನ್ನಲಾಗಿದೆ.
ಬೆಳಿಗ್ಗೆ 4.30ರ ಸುಮಾರಿಗೆ ಪಿಸಿಆರ್ ವ್ಯಾನ್ ಘಟನಾ ಸ್ಥಳಕ್ಕೆ ಧಾವಿಸಿತು. ತೀವ್ರವಾಗಿ ಗಾಯಗೊಂಡ ವ್ಯಕ್ತಿಯನ್ನು ಕ್ಯಾಪಿಟಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ವೈದ್ಯರು ಆ ವ್ಯಕ್ತಿ ಈಗಾಗಲೇ ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು ಎಂದು ಸಿಂಗ್ ಹೇಳಿದ್ದಾರೆ.
ವಿವಿಧ ಮೂಲಗಳಿಂದ ಭಾರೀ ಪ್ರಮಾಣದ ಸಾಲಗಳನ್ನು ಪಡೆದಿದ್ದ ಅನಿರುದ್ಧ್, ಹಣಕಾಸಿನ ನೆರವಿಗಾಗಿ ತನ್ನ ತಂದೆಯೊಂದಿಗೆ ಜಗಳವಾಡುತ್ತಿದ್ದನು ಎಂದು ಹೇಳಲಾಗಿದೆ. ಸುನೀಲ್ ತನ್ನ ಮಗನಿಗೆ ಹಣ ನೀಡಲು ನಿರಾಕರಿಸಿದಾಗ, ಪರಿಸ್ಥಿತಿ ಹಿಂಸಾತ್ಮಕ ವಾಗ್ವಾದಕ್ಕೆ ತಿರುಗಿ ಹಲ್ಲೆಗೆ ಕಾರಣವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.