ಹುಬ್ಬಳ್ಳಿ; ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ತಬಕದಹೊನ್ನಳ್ಳಿ ಪಂಚಾಯಿತಿ ಗ್ರಾಮಸ್ಥರಿಂದ ಮೂಲಭೂತ ಸೌಕರ್ಯಗಳಾದ ವಿದ್ಯುತ್ ದೀಪದ ಸಂಪರ್ಕ ಸ್ವಚ್ಛತೆ ನೀರು ಸರಬರಾಜು ಆಗುತ್ತಿಲ್ಲ. ಕಳೆದ ವರ್ಷದಿಂದ ತಾಲೂಕಿಗೆ ಬರಗಾಲ ಆವರಿಸಿದ್ದು ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಆಗುತ್ತಿಲ್ಲ ಪ್ರತಿ ಸಾರಿ ಸಂಬಂಧಪಟ್ಟ ತಾಲೂಕಿನ ಅಧಿಕಾರಿಗಳ ಗಮನಕ್ಕೆ ತಂದರು ಕ್ರಮ ಕೈಗೊಂಡಿಲ್ಲ ಜಿಲ್ಲಾಧಿಕಾರಿ ಬರಗಾಲದ ಸಂದರ್ಭದಲ್ಲಿ ತಾಲೂಕಿಗೆ ಬಂದಾಗ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿದರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಸದಸ್ಯರು ಬರಗಾಲದ ಪರಿಸ್ಥಿತಿ ನಿಭಾಯಿಸಲು ವಿಫಲರಾಗಿದ್ದಾರೆ.
Hubballi: ಎಸ್. ಜೆ. ಎಮ್. ವಿ.ಮಹಾಂತ ಕಾಲೇಜಿನಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ..!
ತಾಲೂಕಿನ ಸಂಬಂಧ ಪಟ್ಟ ಅಧಿಕಾರಿಗಳ ಜನಪ್ರತಿನಿಧಿಗಳ ನಿರ್ಲಕ್ಷಕ್ಕೆ ಕಾರಣವಾಗಿದೆ. ಕಳೆದ ವರ್ಷ ದಿಂದ ಬರಗಾಲ ಆವರಿಸಿದ್ದು ಕುಡಿಯುವ ನೀರು ಇಲ್ಲದಿರುವ ಕಾರಣ ಗ್ರಾಮ ಪಂಚಾಯಿತಿ ಎದುರಿಗೆ ಇಂದು ಪ್ರತಿಭಟನೆ ನಡೆಸಿದರು. ಸಮಯಕ್ಕೆ ಸರಿಯಾಗಿ ಸಂಬಂಧಪಟ್ಟ ಅಧಿಕಾರಿಗಳು ಬಾರದೆ ಇರುವುದರಿಂದ ಕಳೆದ ಎಂಟು ತಿಂಗಳಿಂದ ಇದೇ ಪರಿಸ್ಥಿತಿ ಅನುಭವಿಸುತ್ತಿದ್ದೇವೆ ಕನಿಕರ ಬಾರದೆ ಇರುವುದರಿಂದ ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮದ ಮುಖ್ಯ ರಸ್ತೆಯಲ್ಲಿ ಮೂರು ನೀರು ಪೂರೈಸುವ ನಳಗಳಿದ್ದು ಇಲ್ಲದಂತಾಗಿದೆ. ಸಮರ್ಪಕವಾದ ಕೊಳವೆ ಬಾವಿ ಇದ್ದರೂ ಮೋಟಾರ ಮಷಿನ್ ಗಳು ಹಾಳಾಗಿದ್ದು ದುರಸ್ತಿ ಮಾಡುವುದಾಗಲಿ ವಿದ್ಯುತ್ ದೀಪಗಳ ಪೂರೈಕೆ ಇಲ್ಲದಿರುವುದರಿಂದ ಕತ್ತಲಲ್ಲಿ ಸಂಚರಿಸುತ್ತಿದ್ದೇವೆ ಇಲ್ಲಿಯವರೆಗೂ ಕ್ರಮ ಕೈಗೊಂಡಿಲ್ಲ ಇದೇ ರೀತಿ ಮುಂದುವರೆದರೆ ಜಿಲ್ಲಾಧಿಕಾರಿಗಳ ಗಮನಕ್ಕೆ ತರುವುದಾಗಿ ತಿಳಿಸಿದರು.
ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆದ ಜಲಜೀವನ್ ಮಷೀನ್ ಕಾಮಗಾರಿಯಿಂದ ಸಮರ್ಪಕವಾಗಿ ನೀರು ಪೂರೈಕೆ ಆಗುತ್ತಿಲ್ಲ ಗ್ರಾಮಕ್ಕೆ ನೀರು ಸರಬರಾಜು ಆಗುವ ಪೈಪು ಲೈನ್ ದುರಸ್ತಿಯಾಗಿ ಜನರಿಗೆ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ ಜಲಜೀವನ್ ಮಷೀನ್ ಕಾಮಗಾರಿ ಗುತ್ತಿಗೆದಾರ ಸಮಸ್ಯೆಯಾಗಿದೆ. ಗ್ರಾಮದ ಓಣಿಗಳಲ್ಲಿ ರಸ್ತೆ ಗಂಡುಗಳು ಬಿದ್ದು ಸಮರ್ಪಕವಾಗಿ ರಸ್ತೆ ನಿರ್ಮಾಣವಾಗಿಲ್ಲ ಮತ್ತು ನೀರಿನ ಕರವನ್ನು ತುಂಬಿದರು ಸಮಸ್ಯೆ ಇದ್ದರು ಕಣ್ಣೆತ್ತಿ ನೋಡದ ಅಧಿಕಾರಿಗಳು ಇದೇ ಪರಿಸ್ಥಿತಿ ಮುಂದುವರೆದರೆ ಗ್ರಾಮ ಪಂಚಾಯಿತಿಗೆ ಬೀಗ ಹಾಕಲಾಗುವುದು ಎಂದು ಪ್ರತಿಭಟನೆ ಮುಖಾಂತರ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಊರಿನ ಹಿರಿಯರು ಉಪಸ್ಥಿತರಿದ್ದರು.