ಮೈಸೂರು: ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಡಿಸಿಎಂ ಚರ್ಚೆ ವಿಚಾರವಾಗಿ ಸಹಕಾರ ಸಚಿವ ಕೆಎನ್ ರಾಜಣ್ಣ ಅವರ ವಿರುದ್ಧ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಾರಿಗಾದರೂ ಯಾವುದಾದರೂ ಸ್ಥಾನಮಾನ ಬೇಕಿದ್ದರೆ ಅದರನ್ನು ಪಕ್ಷದ ವರಿಷ್ಠರ ಬಳಿ ಕೇಳಬೇಕು. ಅದನ್ನು ಬಿಟ್ಟು ಮಾಧ್ಯಮದವರ ಮುಂದೆ ತಮ್ಮ ಆಸೆ ಹೇಳಿಕೊಂಡರೆ ಏನೂ ಪ್ರಯೋಜನ ಹೇಳಿ? ಎಂದು ಟಾಂಗ್ ನೀಡಿದ್ದಾರೆ.
ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ನಿಮ್ಮ ಮುಂದೆ ಹೇಳಿಕೊಂಡರೆ ನೀವೇನಾದರೂ ಸ್ಥಾನ ಕೊಡಿಸ್ತಿರಾ? ಸ್ಥಾನಮಾನದ ವಿಚಾರವನ್ನು ವರಿಷ್ಠರ ಬಳಿ ಮಾತ್ರ ಚರ್ಚೆ ಮಾಡಬೇಕು.ಮಾಧ್ಯಮದ ಬಳಿ ಜನರ ಸಮಸ್ಯೆ ಬಗ್ಗೆ ಚರ್ಚೆ ಮಾಡಿದರೆ ಅದರಿಂದ ಸರಕಾರಕ್ಕೂ ಒಳ್ಳೆಯದು ಜನರಿಗೂ ಒಳ್ಳೆಯದು.
https://ainlivenews.com/do-not-make-these-mistakes-after-eating-cucumber/
ಆ ವಿಚಾರ ಬಿಟ್ಟು ವೈಯಕ್ತಿಕ ವಿಚಾರ ಚರ್ಚೆ ಮಾಡಿದರೆ ಅದು ಸರಕಾರಕ್ಕೆ ನಷ್ಟ ಎಂದು ಅಭಿಪ್ರಾಯಪಟ್ಟರು. ಡಿಸಿಎಂ ಸ್ಥಾನದ ಅವಶ್ಯಕತೆ ಇದೆಯೋ ಇಲ್ಲವೋ ಗೊತ್ತಿಲ್ಲ. ಸ್ಥಾನದ ಆಕಾಂಕ್ಷೆ ಇರೋರು ಸರಿಯಾದ ವ್ಯಕ್ತಿಗಳ ಬಳಿ ಹೋಗಿ ವಿಚಾರ ಹೇಳಲಿ. ನಮ್ಮ ನಾಯಕರು ಎಚ್ಚರಿಕೆ ಕೊಟ್ಟ ಮೇಲೂ ಕೆಲವರು ಈ ವಿಚಾರದ ಬಗ್ಗೆ ಮಾತಾಡ್ತಿದ್ದಾರೆ. ನಮ್ಮ ವರಿಷ್ಠರಿಗೆ ತಾಳ್ಮೆ ಹೆಚ್ಚು. ಆದರೆ ಅವರು ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದರು.