ರಾಮನಗರ: ಮುಡಾ ನಿವೇಶನ ಹಂಚಿಕೆಯಲ್ಲಿ ಸಿಎಂ ಅವರ ಪತ್ನಿ ಯಾಕೆ ಹಗರಣ ಮಾಡುತ್ತಾರೆ. ಅವರ ಆಸ್ತಿ ಸರ್ಕಾರಕ್ಕೆ ಹೋಗಿದೆ, ಅದಕ್ಕೆ ಬದಲಾಗಿ ನಿವೇಶನ ನೀಡಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಡಿಕೆ ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಮೂಡಾದಲ್ಲಿ 4 ಸಾವಿರ ಕೋಟಿ ರೂ. ಹಗರಣವಾಗಿದೆ ಹಾಗೂ ಮುಖ್ಯಮಂತ್ರಿಗಳ ಪತ್ನಿಗೂ ನಿವೇಶನ ನೀಡಲಾಗಿದೆ ಎನ್ನುವ ಆರೋಪಕ್ಕೆ ಉತ್ತರಿಸಿದು.
ಆರ್.ಅಶೋಕ್ ಆರೋಪ ಮಾಡಿದ್ದಾರೆ ಎಂದು ಮರು ಪ್ರಶ್ನಿಸಿದಾಗ ” ಅವರ ಸರ್ಕಾರದಲ್ಲೇ ಹಂಚಿಕೆ ಮಾಡಲಾಗಿದೆ. ಸಿಎಂ ಅವರ ಪತ್ನಿ ಡಿನೋಟಿಫೈ ಮಾಡಿಕೊಳ್ಳದೆ ಪರಿಹಾರ ಪಡೆದಿದ್ದಾರಲ್ಲ ಅದಕ್ಕೆ ಸಂತೋಷ ಪಡಬೇಕು. ಇದರಲ್ಲಿ ತಪ್ಪೇನಿದೆ, ಅವರು ಅರ್ಹರಿದ್ದಾರೆ, ಅದಕ್ಕೆ ತೆಗೆದುಕೊಂಡಿದ್ದಾರೆ. ಇದು ಭ್ರಷ್ಟಾಚಾರ ಹೇಗಾಗುತ್ತದೆ” ಎಂದು ಮರುಪ್ರಶ್ನಿಸಿದರು.
Health Tips: ಸೌತೆಕಾಯಿ ತಿಂದ ನಂತರ ಅಪ್ಪಿ ತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ..!
ಸಚಿವ ಬೈರತಿ ಸುರೇಶ್ ಅವರು ಸಭೆ ನಡೆಸಿ ನಾಲ್ಕು ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಾರೆ ಎಂದಾಗ “ನಮ್ಮ ಮುಖ್ಯಮಂತ್ರಿಗಳು ಭ್ರಷ್ಟಾಚಾರದ ವಿರುದ್ಧ ಅತ್ಯಂತ ಕಠಿಣವಾಗಿದ್ದಾರೆ. ಯಾರೇ ತಪ್ಪು ಮಾಡಿದ್ದರೂ ಅವರಿಗೆ ಯಾವುದೇ ವಿನಾಯಿತಿ ನೀಡದೆ ಶಿಕ್ಷೆ ಆಗಬೇಕು ಎನ್ನುವ ಧೋರಣೆ ಹೊಂದಿದ್ದಾರೆ. ತಪ್ಪು ಮಾಡಿರುವವರ ವಿರುದ್ಧ ಕಟ್ಟುನಿಟ್ಟಾಗಿ ಕ್ರಮ ತೆಗೆದುಕೊಳ್ಳುತ್ತಾರೆ” ಎಂದರು.