ಬೆಂಗಳೂರು: ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಸಲಿಗೆ, ಜು. 2 ಹಾಗೂ 3ರಂದು ಮಾತ್ರ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಹಾಗಾಗಿ, ಜು. 3ರಂದೇ ಕಡೆ ದಿನವಾಗಿದೆ. ಇನ್ನು ಕೆಲವೇ ಗಂಟೆಗಳು ಮಾತ್ರ ಬಾಕಿಯಿದ್ದು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಬೆಂಗಳೂರು ಒನ್, ಕರ್ನಾಟಕ ಒನ್ ಮುಂತಾದ ಕಡೆಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ.
Health Tips: ಸೌತೆಕಾಯಿ ತಿಂದ ನಂತರ ಅಪ್ಪಿ ತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ..!
ಅಷ್ಟೇ ಅಲ್ಲದೆ, ರೇಷನ್ ಕಾರ್ಡ್ ನಲ್ಲಿ ಹೆಸರುಗಳನ್ನು ಸೇರಿಸುವುದು, ಹೆಸರು ತಿದ್ದುಪಡಿ ಮಾಡುವುದು ಹಾಗೂ ಇತ್ಯಾದಿ ಕೆಲಸಗಳನ್ನು ಮಾಡಲೂ ಅವಕಾಶ ಕಲ್ಪಿಸಲಾಗಿದ್ದು, ಅದಕ್ಕೂ ಜು. 3ರಂದೇ ಕಡೆಯ ದಿನವಾಗಿರುತ್ತದೆ. ಕುಟುಂಬದ ಸದಸ್ಯರ ಹೆಸರು ಸೇರಿಸುವುದು, ಡಿಲೀಟ್ ಮಾಡುವುದು, ಮೊಬೈಲ್ ನಂಬರ್ ಸೇರ್ಪಡೆ ಅಥವಾ ಬದಲಾವಣೆ, ಆಧಾರ್ ಕಾರ್ಡ್ ಸಂಖ್ಯೆ ಜೋಡಣೆ ಇತ್ಯಾದಿ ಕೆಲಸಗಳನ್ನು ಮಾಡಲು ಅವಕಾಶವಿದೆ.
ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲೆಗಳು ಯಾವುವು?
- ಎಲ್ಲಾ ಸದಸ್ಯರ ಆಧಾರ್ ಕಾರ್ಡ್
- ಆದಾಯ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ವಿಳಾಸದ ಪುರಾವೆ
- ಜನ್ಮ ದಿನಾಂಕ ( ಆರು ವರ್ಷದ ಒಳಗಿನ ಮಕ್ಕಳಿಗೆ ಮಾತ್ರ)
- ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ.