ಬೆಂಗಳೂರು: 2022-23 ನೇ ಶೈಕ್ಷಣಿಕ ವರ್ಷದಲ್ಲಿ ವೃತ್ತಿಪರ ಕೋರ್ಸುಗಳೂ ಸೇರಿದಂತೆ ಎಲ್ಲಾ ವಿಧದ ಪದವೀಧರ ನಿರುದ್ಯೋಗಿ ಯುವಕ-ಯುವತಿಯರಿಗೆ ಮಾಸಿಕ ರೂ.3,000 ಹಾಗೂ ಡಿಪ್ಲೊಮಾ ಪಾಸಾದ ನಿರುದ್ಯೋಗಿ ಯುವಜನರಿಗೆ ಮಾಸಿಕ ರೂ. 1,500 ನಿರುದ್ಯೋಗ ಭತ್ಯೆ ನೀಡಲು ಸರ್ಕಾರ ನಿರ್ಧರಿಸಿದೆ.
ಯುವ ನಿಧಿಗೆ ಅರ್ಜಿ ಸಲ್ಲಿಸಲು ಯಾರು ಅರ್ಹರಲ್ಲ?
- ಉನ್ನತ ಶಿಕ್ಷಣಕ್ಕಾಗಿ ಪ್ರವೇಶ ಪಡೆದು ಅಧ್ಯಯನ ಮುಂದುವರೆಸಿರುವವರು.
- ಯಾವುದೇ ಅಪ್ರೆಂಟಿಸ್ ಹುದ್ದೆಗೆ ನಿಯೋಜನೆಗೊಂಡಿರುವವರು.
- ಸರ್ಕಾರಿ ಮತ್ತು ಖಾಸಗಿ ವಲಯ ಉದ್ಯೋಗ ಪಡೆದಿರುವವರು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
- ಆಧಾರ್ ಕಾರ್ಡ್
- ಎಸ್ಎಸ್ಎಲ್ಸಿ ಅಂಕಪಟ್ಟಿ
- ಪದವಿ ಅಥವಾ ವೃತ್ತಿಪರ ಕೋರ್ಸ್ ಪಡೆದ ಪ್ರಮಾಣ ಪತ್ರ ಅಥವಾ ಪಾಸ್ ಸರ್ಟಿಫಿಕೇಟ್
- ಕೋರ್ಸ್ ಮುಗಿದು 6 ತಿಂಗಳಾದರೂ ಉದ್ಯೋಗ ಪಡೆಯದ ಕುರಿತು ಸ್ವಯಂ ದೃಢೀಕೃತ ಪ್ರಮಾಣ ಪತ್ರ ಅಥವಾ ನೋಟರಿ
- ಬ್ಯಾಂಕ್ ಖಾತೆ ಪಾಸ್ ಬುಕ್ ಪ್ರತಿ
ಯುವನಿಧಿ ಯೋಜನೆಯು ಅಡಿಯಲ್ಲಿ ಫಲಾನುಭವಿಗಳಾಗಲು ಸೇವಾಸಿಂಧು ಪೋರ್ಟಲ್ ನಲ್ಲಿ ತಮ್ಮ ಹೆಸರನ್ನು ನೋಂದಣಿ ಮಾಡಬೇಕಾಗಿತ್ತು. ಅರ್ಜಿ ಸಲ್ಲಿಕೆಯ ವೇಳೆಯಲ್ಲಿ ತಮ್ಮ ವಿದ್ಯಾರ್ಹತೆ, ಆಧಾರ್ ಕಾರ್ಡ್ ಸೇರಿದಂತೆ ಅಗತ್ಯ ದಾಖಲೆಗಳನ್ನು ನೀಡಬೇಕಾಗಿತ್ತು. ಅರ್ಜಿ ಸಮರ್ಪಕವಾಗಿ ಇದ್ದರೆ ಅಂತಹ ಫಲಾನುಭವಿಗಳು ಯೋಜನೆಯ ಪ್ರಯೋಜನ ಪಡೆಯಬಹುದಾಗಿತ್ತು. ಆದ್ರೀಗ ಹೊಸ ರೂಲ್ಸ್ ಜಾರಿಯಾಗಿದೆ.
ಯುವನಿಧಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿರುವ ಯೋಜನೆಯ ಪ್ರಯೋಜನ ಪಡೆಯುತ್ತಿರುವ ಅರ್ಹ ಫಲಾನುಭವಿಗಳು ಇನ್ಮುಂದೆ ತಮ್ಮ ವಿದ್ಯಾರ್ಹತೆಗೆ ಸಂಬಂಧಿಸಿದ ಮೂಲ ದಾಖಲೆ ಪತ್ರಗಳ ಜೊತೆಗೆ ಆಧಾರ್ ಕಾರ್ಡ್, ಇತರ ದಾಖಲೆಯನ್ನು ಆಯಾಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಪರಿಶೀಲನೆಗೆ ಹಾಜರಾಗಬೇಕಾಗಿದೆ.
Health Tips: ಸೌತೆಕಾಯಿ ತಿಂದ ನಂತರ ಅಪ್ಪಿ ತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ..!
ಯುವನಿಧಿ ಯೋಜನೆಯ ಫಲಾನುಭವಿಗಳು ಪ್ರತೀ ತಿಂಗಳು ೨೫ನೇ ತಾರೀಕನ ಒಳಗಾಗಿ ಸೇವಾಸಿಂಧು ಪೋರ್ಟ್ನಲ್ಲಿ ತಾವು ಉದ್ಯೋಗಕ್ಕೆ ಸೇರ್ಪಡೆ ಆಗಿಲ್ಲ ಎಂಬ ಕುರಿತು ಸ್ವಯಂ ಘೋಷಿತ ಪ್ರಮಾಣ ಪತ್ರಗಳನ್ನು ಸಲ್ಲಿಕೆ ಮಾಡುವಂತೆ ಹೊಸ ಆದೇಶದಲ್ಲಿ ತಿಳಿಸಲಾಗಿದೆ.
ಪದವಿ ಪಡೆದು 180 ದಿನಗಳು ಕಳೆದರೂ ಉದ್ಯೋಗ ಸಿಗದೆ ಭವಿಷ್ಯದ ಬಗ್ಗೆ ಆತಂಕದಲ್ಲಿರುವ ನಿರುದ್ಯೋಗಿ ಯುವಜನರಿಗೆ ಮಾಸಿಕ ನಿರುದ್ಯೋಗ ಭತ್ಯೆ ನೀಡುವ ಮೂಲಕ ಉದ್ಯೋಗ ಹುಡುಕಾಟಕ್ಕೆ ಅನುಕೂಲ ಕಲ್ಪಿಸುವುದು ಮತ್ತು ಆರ್ಥಿಕ ಸಂಕಷ್ಟದಿಂದ ಅವರನ್ನು ಪಾರುಮಾಡುವುದು ನಮ್ಮ ಈ ಯೋಜನೆಯ ಉದ್ದೇಶ. ಲಿಂಗತ್ವ ಅಲ್ಪಸಂಖ್ಯಾತರು ಕೂಡ ಯೋಜನೆಯ ಲಾಭ ಪಡೆಯಬಹುದಾಗಿದೆ.