ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಂಡಾಗಲೇ ಲೂಟಿ ಹೊಡೆಯಲು ಸುರಂಗ ಕೊರೆದಿದ್ದಾರೆ. ಈಗ ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದ್ದು, ಈ ಸರ್ಕಾರ ಲೂಟಿ ಮಾಡೆಲ್ ನೀಡಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ದಲಿತರ ಹಣವನ್ನು ತೆಲಂಗಾಣದ ಬಾರ್ ಅಂಡ್ ರೆಸ್ಟೋರೆಂಟ್ಗೆ, ಚಿನ್ನದ ಅಂಗಡಿಗಳಿಗೆ ಟಕಾ ಟಕ್ ಎಂದು ವರ್ಗಾವಣೆ ಮಾಡಿದ್ದಾರೆ. ಬಿಜೆಪಿಯ ಹೋರಾಟದ ಫಲವಾಗಿ ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಿದ್ದರೂ, ಸ್ವಯಂ ಪ್ರೇರಣೆಯಿಂದ ನೀಡಿದ್ದಾರೆ ಎಂದು ಕಾಂಗ್ರೆಸ್ನವರು ಹೇಳುತ್ತಿದ್ದಾರೆ. ಈಗ ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎಂದು ದೂರಿದರು.
Health Tips: ಸೌತೆಕಾಯಿ ತಿಂದ ನಂತರ ಅಪ್ಪಿ ತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ..!
ಹಿಂದೆ ತುರ್ತು ಪರಿಸ್ಥಿತಿ ಜಾರಿ ಮಾಡಿದಂತೆಯೇ ಈಗ ಕಾಂಗ್ರೆಸ್ ಸರ್ಕಾರ ಬೆಂಗಳೂರಿನಲ್ಲಿ ತುರ್ತು ಸ್ಥಿತಿ ಜಾರಿಗೊಳಿಸಿದೆ. ಬಿಜೆಪಿ ಶಾಸಕರು ಸಿಎಂ ಮನೆಗೆ ಬರಬಾರದೆಂದು ನೂರಾರು ಪೊಲೀಸರನ್ನು ನಿಯೋಜಿಸಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಲಾಗಿದೆ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಮಾಡಿದ ಭಯೋತ್ಪಾದಕರನ್ನು ಹಿಡಿಯಲು ಐದಾರು ಪೊಲೀಸರನ್ನು ಕಳುಹಿಸಿದ್ದರು. ಇಲ್ಲಿ ಶಾಸಕರನ್ನು ಹಿಡಿಯಲು ನೂರಾರು ಪೊಲೀಸರನ್ನು ಕಳುಹಿಸಲಾಗಿದೆ ಎಂದು ಅಶೋಕ್ ಆಕ್ರೋಶ ಹೊರ ಹಾಕಿದರು.