ಕಣ್ಣೂರು:- ಮಹಿಳೆ ಮೇಲೆ ಕಾಂಗ್ರೆಸ್ ಮುಖಂಡನ ಪುತ್ರನಿಂದ ರೇಪ್ ನಡೆದಿರುವ ಘಟನೆ ಕೇರಳದ ಪಯ್ಯನೂರು ಬಸ್ ನಿಲ್ದಾಣದ ಬಳಿ ಇರುವ ಆರೋಗ್ಯ ಚಿಕಿತ್ಸಾಲಯದಲ್ಲಿ ಜರುಗಿದೆ.
ಕೊಪ್ಪಳದಲ್ಲಿ ಕರಡಿ ಕಾಟ..ಜನತೆ ಕಂಗಾಲು.. ಸರ್ಕಾರದ ವಿರುದ್ಧ ಸಾರ್ವಜನಿಕರ ಆಕ್ರೋಶ!
ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಸ್ಥಳೀಯ ಕಾಂಗ್ರೆಸ್ ಮುಖಂಡರೊಬ್ಬರ ಪುತ್ರ ಶರತ್ ನಂಬಿಯಾರ್ನನ್ನು ಪಯ್ಯನೂರು ಪೊಲೀಸರು ಬಂಧಿಸಿದ್ದಾರೆ.
ಕ್ಷೇಮ ಕೇಂದ್ರ ಮತ್ತು ಜಿಮ್ನ ಮಾಲೀಕ ಶರತ್ ಚಿಕಿತ್ಸಾ ಕೊಠಡಿಯನ್ನು ಒಳಗಿನಿಂದ ಲಾಕ್ ಮಾಡಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ಸ್ವತಃ ಫಿಸಿಯೋಥೆರಪಿಸ್ಟ್ ಅಲ್ಲದಿದ್ದರೂ, ಮಹಿಳೆಯರಿಗೆ ತಾನೇ ಫಿಸಿಯೋಥೆರಪಿ ಮಾಡುತ್ತೇನೆ ಎಂದು ಆತ ಮುಂದೆ ಹೋಗುತ್ತಿದ್ದ ಎಂದು ಆರೋಪಿಸಲಾಗಿದೆ. ಅತ್ಯಾಚಾರಕ್ಕೊಳಗಾದ ಮಹಿಳೆ ಪೊಲೀಸರಿಗೆ ದೂರು ನೀಡಿದಾಗ ಈ ಘಟನೆ ಬೆಳಕಿಗೆ ಬಂದಿದೆ
ದೂರು ಸ್ವೀಕರಿಸಿದ ಅಧಿಕಾರಿಗಳು ಸೋಮವಾರ ರಾತ್ರಿ ಶರತ್ನನ್ನು ಬಂಧಿಸಿದ್ದಾರೆ. ಆತನನ್ನು ಮಂಗಳವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನಂತರ ಕಸ್ಟಡಿಗೆ ನೀಡಲಾಗಿದೆ.