ಬೆಂಗಳೂರು:- ಕಣ್ಣುಕುಕ್ಕುವ ಎಲ್ಇಡಿ ಲೈಟ್ ವಿರುದ್ಧ ಕಾರ್ಯಾಚರಣೆ ಶುರು ಮಾಡಿರುವ ಪೊಲೀಸರು ಕರ್ನಾಟಕದಾದ್ಯಂತ 1500ಕ್ಕೂ ಹೆಚ್ಚು ಪ್ರಕರಣ ದಾಖಲು ಮಾಡಿದ್ದಾರೆ.
ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣ… ಹಗರಣದಲ್ಲಿ ನನ್ನ ಪಾತ್ರವಿಲ್ಲ ಎಂದ ದದ್ದಲ್!
ಈ ಬಗ್ಗೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ) ತಿಳಿಸಿದ್ದಾರೆ. ತೀಕ್ಷ್ಣ ಬೆಳಕು ಸೂಸುವಂಥ ಎಲ್ಇಡಿ ಲೈಟ್ಗಳನ್ನು ಅಳವಡಿಸಿದ ಅತಿಹೆಚ್ಚು ಪ್ರಕರಣಗಳು ಬೆಂಗಳೂರಿನಲ್ಲಿ ವರದಿಯಾಗಿವೆ. ನಗರದಲ್ಲಿ 686 ಕೇಸ್ ದಾಖಲಿಸಲಾಗಿದೆ. ನಂತರದ ಸ್ಥಾನಗಳಲ್ಲಿ ಮಂಗಳೂರು ನಗರ (96) ಹಾಗೂ ರಾಯಚೂರು (93) ಇವೆ. ಕೊಪ್ಪಳ, ಕೆಜಿಎಫ್, ಕೋಲಾರ, ಚಿಕ್ಕಬಳ್ಳಾಪುರಗಳಲ್ಲಿ ಒಂದೇ ಒಂದು ಪ್ರಕರಣವೂ ದಾಖಲಾಗಿಲ್ಲ.
ಬಿಸಿ ಮುಸ್ಟಿಸಲು ಶುರುಮಾಡಿದ್ದೇವೆ. ಕೇಂದ್ರ ಮೋಟಾರು ವಾಹನ ಕಾಯ್ದೆ ಉಲ್ಲಂಘಿಸಿ ತೀಕ್ಷ್ಣ ಬೆಳಕು ಸೂಸುವ ಎಲ್ಇಡಿ ಲೈಟ್ ಅಳವಡಿಸಿದ ಸಂಬಂಧ 1518 ಪ್ರಕರಣಗಳನ್ನು ದಾಖಲಿಸಲಾಗಿದೆ. ಕ್ರಮ ಕೈಗೊಂಡ ಅಧಿಕಾರಿಗಳಿಗೆ, ಸಿಬ್ಬಂದಿಗೆ ವಂದನೆಗಳು ಎಂದು ಅಲೋಕ್ ಕುಮಾರ್ ಎಕ್ಸ್ ಸಂದೇಶದಲ್ಲಿ ತಿಳಿಸಿದ್ದಾರೆ.