ಬಹುತೇಕ ಹಿಂದೂಗಳಲ್ಲಿ ಆಷಾಡ ಮಾಸ ಅಶುಭ ಮಾಸ ಎಂಬ ಕಲ್ಪನೆ ಬೇರೂರಿಬಿಟ್ಟಿದೆ. ಈ ಮಾಸದಲ್ಲಿ ಯಾವುದೇ ಶುಭಕರ ಕೆಲಸಗಳನ್ನು ಮಾಡಿದರು ಅವು ಫಲ ನೀಡುವುದಿಲ್ಲ. ಈ ಮಾಸದಲ್ಲಿ ಹುಣ್ಣಿಮೆಯ ದಿನ ಚಂದ್ರನು ಉತ್ತರಾಷಾಢ ಅಥವಾ ಪೂರ್ವಾಷಾಢ ನಕ್ಷತ್ರಗಳಲ್ಲಿ ಇರುವಾಗ ಆಷಾಢ ಮಾಸ ಎಂದು ಕರೆಯುತ್ತಾರೆ. ಈ ತಿಂಗಳು ಶೂನ್ಯ ತಿಂಗಳು ಎನ್ನುತ್ತಾರೆ ಹೀಗಾಗಿ ಈ ಮಾಸದಲ್ಲಿ ಶುಭಕಾರ್ಯಗಳಿಗೆ ಮನ್ನಣೆ ಇಲ್ಲ. ಆದರೆ ಒಂದು ಮಾತು ಆಷಾಢ ಮಾಸ ಅಶುಭ ಮಾಸ ಎಂದು ಯಾವ ಶಾಸ್ತ್ರಗಳಲ್ಲೂ ಉಲ್ಲೇಖಿಸಿಲ್ಲ.
ಇಂತಹವರು ಹಲಸಿನ ಹಣ್ಣಿನಿಂದ ದೂರವಿದ್ರೆ ಒಳ್ಳೆಯದು: ಇಲ್ಲದಿದ್ರೆ ಅಪಾಯ ಕಟ್ಟಿಟ್ಟಬುತ್ತಿ!
ಈ ಮಾಸದಲ್ಲಿ ತ್ರಿಮೂರ್ತಿ ರೂಪ ದತ್ತಾತ್ರೇಯ (Dattatreya Trimurti Rupa) ಗುರುವನ್ನು ಪೂಜಿಸುವ ದಿನವೇ ಗುರು ಪೂರ್ಣಿಮೆ. ಇದನ್ನು ವ್ಯಾಸ ಪೂರ್ಣಿಮೆ ಎಂದೂ ಕರೆಯುತ್ತಾರೆ. ಅಂದು ಮಹಾಭಾಗವತವನ್ನು ಬರೆದ ವೇದವ್ಯಾಸರ ಜನ್ಮದಿನ. ಇದಲ್ಲದೆ ವ್ಯಾಸರು ವೇದಗಳನ್ನು ನಾಲ್ಕು ಭಾಗಗಳಾಗಿ ವಿಂಗಡಿಸಿದ ದಿನ ಎಂದೂ ಹೇಳಲಾಗುತ್ತದೆ.
ಆಷಾಢ ಮಾಸ ಪ್ರಾರಂಭವಾದ ನಂತರ ಶುಭ ಕಾರ್ಯಗಳಾದ ಮದುವೆಯ ಮಾತುಕತೆ, ಮದುವೆ, ಗೃಹಪ್ರವೇಶ, ಉಪನಯನ, ವಾಹನ ಮತ್ತು ಜಮೀನು ಕೊಳ್ಳುವುದು, ಹೊಸ ವ್ಯಾಪಾರ ಪ್ರಾರಂಭ ಮುಂತಾದ ಕಾರ್ಯಗಳೆಲ್ಲಾ ನಿಷೇದವಾಗುವುದು. ಇದಕ್ಕೆ ಮುಖ್ಯವಾಗಿ ಕಾರಣ ನೂರಾರು. ವರ್ಷಗಳ ಹಿಂದೆ ಆಷಾಢ ಮಾಸದಲ್ಲಿ ಮಳೆಯ ಆರ್ಭಟ ಹೆಚ್ಚಿರುತ್ತಿತ್ತು. ಮನೆಯಿಂದ ಹೊರಗೆ ಹೋಗುವುದೇ ಬಹಳ ಕಷ್ಟಕರವಾಗಿರುತ್ತಿತ್ತು. ಈ ರೀತಿ ನಿರಂತರವಾದ ಮಳೆ, ಗಾಳಿಯಿಂದ ಸಂಚಾರಕ್ಕೆ ಅಡೆತಡೆ ಉಂಟಾಗುತ್ತಿತ್ತು. ಈ ಎಲ್ಲಾ ಕಾರಣಗಳಿಂದ ಹೊರಗಿನ ಕೆಲಸಗಳು ಕುಂಟಿತವಾಗುತ್ತಿದ್ದವು ಹಾಗೂ ರೈತರಿಗೆ ಹೊಲ ಗದ್ದೆಗಳಲ್ಲಿ ವಿಪರೀತ ಕೆಲಸ ಕಾರ್ಯಗಳು ಇರುತ್ತಿತ್ತು. ಈ ಕಾರಣಗಳಿಂದ ಬೇರೆ ವ್ಯವಹಾರಕ್ಕೆ ಸಮಯವೇ ಸಿಗುತ್ತಿರಲಿಲ್ಲ. ಈ ಎಲ್ಲಾ ಕಾರಣಗಳಿಂದ ಆಷಾಢಮಾಸದಲ್ಲಿ ಶುಭ ಕಾರ್ಯ ಮಾಡಲು ಅನಾನುಕೂಲವಾಗಿದ್ದರಿಂದ ಶುಭಕಾರ್ಯ ಮಾಡುವುದನ್ನು ನಿಷೇಧಿಸಿದ್ದರು.
Dengue Danger: ರಾಜ್ಯದಲ್ಲಿ ಡೆಂಗ್ಯೂ ಭೀಕರ: ತಡೆಯುವುದು ಹೇಗೆ? ಚಿಕಿತ್ಸಾ ಕ್ರಮಗಳೇನು?
ಮದುವೆಯಾದ ಹೊಸ ವರ್ಷದಲ್ಲಿ ಅತ್ತೆ-ಸೊಸೆ ಆಷಾಢ ಮಾಸದಲ್ಲಿ ಕೂಡಿ ಒಂದೇ ಮನೆಯಲ್ಲಿ ವಾಸಿಸುವುದು ನಿಷೇಧ ಎಂದು ಕೆಲವು ಕಡೆ ಪದ್ಧತಿ ಇದೆ. ಆಷಾಢದಲ್ಲಿ ಮಳೆ ಹೆಚ್ಚು ಇರುವುದರಿಂದ ಹೊಲ ಗದ್ದೆಗಳಲ್ಲಿ ಮತ್ತು ಮನೆಯಲ್ಲಿ ಹೆಣ್ಣು ಮಕ್ಕಳಿಗೆ ಕೆಲಸ ಕಾರ್ಯಗಳು ಹೆಚ್ಚಿರುತ್ತವೆ. ಅತ್ತೆಯಾದವರು ಸೊಸೆಗೆ ಹೆಚ್ಚು ಕೆಲಸದ ಒತ್ತಡ ತರಬಹುದು, ಇದರಿಂದ ಅವರಿಬ್ಬರಲ್ಲಿ ವೈಮನಸ್ಸುವುಂಟಾಗಿ ಜಗಳಕ್ಕೆ ಕಾರಣ ಆಗಬಹುದು ಎಂದು ಒಂದು ತಿಂಗಳ ಕಾಲ ತವರು ಮನೆಗೆ ಕಳಿಸುವ ಸಂಪ್ರದಾಯ ಬಂದಿರಬೇಕು.
ಆಷಾಢ ಮಾಸದ ಮಹತ್ವ
ಅಮರನಾಥದ ಹಿಮಲಿಂಗ ದರ್ಶನ ಪ್ರತಿ ವರ್ಷ ಆರಂಭವಾಗುವುದು ಈ ಸಮಯದಲ್ಲೇ. ಪ್ರಥಮ ಏಕಾದಶಿ ವ್ರತ ಆರಾಧನೆ ಬರುವುದು ಆಷಾಢದಲ್ಲಿ.
ಶಿವ ಪಾರ್ವತಿಗೆ ಅಮರತ್ವದ ರಹಸ್ಯ ಹೇಳಿರುವುದು, ಗಂಗೆ ಭೂಮಿಗೆ ಉತ್ತರಾಭಿಮುಖವಾಗಿ ಹರಿದು ಬಂದಿದ್ದು ಇದೇ ಮಾಸದಲ್ಲಿ. ಮಹಾ ಪತಿವ್ರತೆ ಅನುಸೂಯಾದೇವಿ ನಾಲ್ಕು ಸೋಮವಾರ ಶಿವ ವ್ರತ ಮಾಡಿದ್ದು ಇದೇ ಆಷಾಡದಲ್ಲಿ ಮಾಸದಲ್ಲಿ. ಆಷಾಡದ ಶುಕ್ರವಾರಗಳಲ್ಲಿ ಲಕ್ಷ್ಮಿ ಪೂಜೆಯನ್ನು ವಿಶೇಷವಾಗಿ ಆಚರಿಸುವರು.