ಟಿ20 ವಿಶ್ವಕಪ್ನೊಂದಿಗೆ ಟೀಂ ಇಂಡಿಯಾ ಬಾರ್ಬಾಡೋಸ್ ನಿಂದ ತಾಯ್ನಾಡಿಗೆ ಮರಳಿ ಬಂದಿದ್ದಾರೆ. ಭಾರತ ತಂಡವು ಇಂದು ಮುಂಬೈನಲ್ಲೆ ವಿಜಯಯಾತ್ರೆ ನಡೆಸಲಿದ್ದು ಓಪನ್ ಬಸ್ನಲ್ಲಿ ನಡೆಯಲಿರುವ ಈ ರೋಡ್ ಶೋ ಮುಂಬೈನ ನಾರಿಮನ್ ಪಾಯಿಂಟ್ನಲ್ಲಿರುವ ಏರ್ ಇಂಡಿಯಾ ಕಟ್ಟಡದಿಂದ ಪ್ರಾರಂಭವಾಗಿ ವಾಂಖೆಡೆ ಸ್ಟೇಡಿಯಂನಲ್ಲಿ ಕೊನೆಗೊಳ್ಳಲಿದೆ ಎಂದು ತಿಳಿದು ಬಂದಿದೆ.
ಟೀಂ ಇಂಡಿಯಾ ಆಟಗಾರರನ್ನು ಭೇಟಿಯಾದ ಪ್ರಧಾನಿ: ವಿಜಯಯಾತ್ರೆ ನಡೆಸಲಿರುವ ರೋಹಿತ್ ಪಡೆ!
ಭಾರತ ತಂಡವು ಕೊನೆಯ ಬಾರಿಗೆ ಐಸಿಸಿ ಟ್ರೋಫಿ ಗೆದ್ದಿದ್ದು 2013 ರಲ್ಲಿ. ಇದಾದ ಬಳಿಕ ಹಲವು ಟೂರ್ನಿಗಳಲ್ಲಿ ಫೈನಲ್ ಆಡಿದರೂ, ಟೀಮ್ ಇಂಡಿಯಾ ಪಾಲಿಗೆ ಪ್ರಶಸ್ತಿ ಮರೀಚಿಕೆಯಾಗಿತ್ತು. ಅದರಲ್ಲೂ 2023 ರ ಏಕದಿನ ವಿಶ್ವಕಪ್ನ ಫೈನಲ್ಗೆ ತಲುಪಿದ್ದ ಭಾರತ ತಂಡವು ಅಂತಿಮ ಹಣಾಹಣಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಮುಗ್ಗರಿಸಿತ್ತು.
ಆದರೆ ಈ ಬಾರಿ ಪ್ರಶಸ್ತಿ ಗೆಲ್ಲಬೇಕೆಂದು ಪಣತೊಟ್ಟಿದ್ದ ಟೀಮ್ ಇಂಡಿಯಾ ಆರಂಭದಿಂದಲೇ ಭರ್ಜರಿ ಪ್ರದರ್ಶನ ನಿಡಿದ್ದರು. ಅಲ್ಲದೆ ಸೋಲಿಲ್ಲದ ಸರದಾರನಾಗಿ ಫೈನಲ್ಗೆ ಪ್ರವೇಶಿಸಿತ್ತು. ಅಂತಿಮ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು 7 ರನ್ಗಳಿಂದ ಮಣಿಸಿದ ಟೀಮ್ ಇಂಡಿಯಾ 11 ವರ್ಷಗಳ ಬಳಿಕ ಐಸಿಸಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತ್ತು.
ಪತ್ನಿ ಅನುಷ್ಕಾ ಶರ್ಮಾಗೆ ಚಂಡಮಾರುತದ ರಭಸ ಹೇಗಿದೆ ಎಂದು ತಿಳಿಸಿದ ಕೊಹ್ಲಿ!
ಇನ್ನು ವಾಂಖೆಡೆ ಸ್ಟೇಡಿಯಂನಲ್ಲಿ ಟೀಮ್ ಇಂಡಿಯಾ ಆಟಗಾರರು ವಿಜಯೋತ್ಸವ ಆಚರಿಸಲಿದ್ದು, ಈ ವೇಳೆ ಬಿಸಿಸಿಐ ಭಾರತ ತಂಡಕ್ಕೆ 125 ಕೋಟಿ ರೂ.ಗಳ ಬಹುಮಾನ ಮೊತ್ತವನ್ನು ವಿತರಿಸಲಿದೆ
ಟೀಮ್ ಇಂಡಿಯಾದ ವಿಜಯಯಾತ್ರೆಯು ಸಂಜೆ 5 ಗಂಟೆಯಿಂದ ಶುರುವಾಗಲಿದ್ದು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮನವಿ ಮಾಡಿದ್ದಾರೆ.