ಮೈಸೂರು: ಬಿಜೆಪಿ ಸರಕಾರದ ಅವಧಿಯಲ್ಲೇ ಮುಡಾದಲ್ಲಿ ಭಾರಿ ಹಗರಣ ನಡೆದಿದ್ದು, ಅದನ್ನು ಮುಚ್ಚಿ ಹಾಕಲು ಕಾಂಗ್ರೆಸ್ ಸರಕಾರದ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ”ಮುಡಾದಲ್ಲಿ 2019-20ರಿಂದಲೂ ಭಾರಿ ಭ್ರಷ್ಟಾಚಾರ ನಡೆದಿದೆ. 50:50ರ ನಿವೇಶನ ಹಂಚಿಕೆಯಲ್ಲಿ ಹಗರಣ ನಡೆದಿದ್ದು,
ಈ ಹಿಂದೆ ಮುಡಾ ಆಯುಕ್ತರಾಗಿದ್ದ ನಟೇಶ್ ಹಾಗೂ ಅಂದಿನ ಬಿಜೆಪಿ ಸರಕಾರದ ಕೆಲವರು ಹಗರಣದಲ್ಲಿ ಭಾಗಿಯಾಗಿದ್ದಾರೆ. ಆದರೆ, ಅದನ್ನು ಮುಚ್ಚಿ ಹಾಕುವುದರೊಂದಿಗೆ ಜನರ ಗಮನ ಬೇರೆಡೆ ಸೆಳೆಯಲು ಇದೀಗ ಯಾವುದೇ ದಾಖಲೆ ಇಲ್ಲದೆ ಕಾಂಗ್ರೆಸ್ ಸರಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆ,” ಎಂದು ಸುದ್ದಿಗೋಷ್ಠಿಯಲ್ಲಿ ದೂರಿದರು.
Yuvanidhi Yojana: ಫಲಾನುಭವಿಗಳೇ ಗಮನಿಸಿ.. ಯುವನಿಧಿ ಯೋಜನೆಗೆ ಹೊಸ ರೂಲ್ಸ್..! ಈ ಕೆಲಸ ಮಾಡದಿದ್ರೆ ಹಣ ಬರಲ್ಲ
ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಸೇರಿದಂತೆ ಬಿಜೆಪಿಯ ಕೆಲ ಮುಖಂಡರು ತಲೆ ಕೆಟ್ಟಿರುವಂತೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ಯಾವುದೇ ಆರೋಪ ಮಾಡಬೇಕಾದರೂ ದಾಖಲೆಗಳನ್ನು ನೀಡಬೇಕು. ಹಿಟ್ ಆ್ಯಂಡ್ ರನ್ ರೀತಿ ಮಾಡಬಾರದು. ಗಾಳಿಯಲ್ಲಿ ಗುಂಡು ಹಾರಿಸಿದಂತೆ ಮಾತನಾಡಬಾರದು. ಮುಡಾದಲ್ಲಿ ನಡೆದಿರುವ ಹಗರಣ ಪತ್ತೆಗಾಗಿ ರಾಜ್ಯ ಸರಕಾರ ಇಬ್ಬರು ಐಎಎಸ್ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಿದ್ದು, ಒಂದು ತಿಂಗಳೊಳಗೆ ಹಗರಣದಲ್ಲಿ ಯಾರ ಪಾತ್ರವಿದೆ ಎಂಬುದು ಬಹಿರಂಗಗೊಳ್ಳಲಿದೆ,” ಎಂದು ಹೇಳಿದರು.