ಮಂಗಳೂರು: ಜುಲೈ ಮೂರನೇ ವಾರದಿಂದ ರಾಜ್ಯದ ವಿವಿಧ ಚಾರಣಾಪಥಗಳಿಗೆ ಆನ್ ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ಜಾರಿಗೊಳ್ಳಲಿದೆ ಎಂದು ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಮಾಹಿತಿ ನೀಡಿದ್ದಾರೆ. ಅರಣ್ಯ ಭವನದಲ್ಲಿ ಮಾತನಾಡಿದ ಅವರು, ಕೆಲವೊಂದು ಕಡೆಗಳಲ್ಲಿ ಅರಣ್ಯ ಇಲಾಖೆ ಆನ್ ಲೈನ್ ಟಿಕೆಟ್ ವ್ಯವಸ್ಥೆ ಈಗಾಗಲೇ ಮಾಡಲಾಗಿದೆ. ಪ್ರವಾಸಿಗರ ಸಂಖ್ಯೆಗಳಿಗೆ ಅನುಗುಣವಾಗಿ ಒಂದೇ ವೆಬ್ಸೈಟ್ನಲ್ಲಿ ಎಲ್ಲಾ ಚಾರಣಾಪಥಗಳಿಗೆ ಆನ್ಲೈನ್ ಬುಕ್ಕಿಂಗ್ ಮಾಡಲು ಜುಲೈ 15ರೊಳಗೆ ನಮ್ಮ ಸಾಫ್ಟ್ವೇರ್ ಅಭಿವೃದ್ಧಿಯಾಗಲಿದೆ ಎಂದು ತಿಳಿಸಿದರು.
Yuvanidhi Yojana: ಫಲಾನುಭವಿಗಳೇ ಗಮನಿಸಿ.. ಯುವನಿಧಿ ಯೋಜನೆಗೆ ಹೊಸ ರೂಲ್ಸ್..! ಈ ಕೆಲಸ ಮಾಡದಿದ್ರೆ ಹಣ ಬರಲ್ಲ
ಮಂಗಳೂರು ವೃತ್ತದಲ್ಲಿ ಅರಣ್ಯ ಇಲಾಖೆಯ ಜಮೀನು ಒತ್ತುವರಿ ಪ್ರಕರಣಗಳನ್ನು ಗುರುತಿಸಿ ಕಾನೂನು ರೀತಿ ನೋಟಿಸ್ ಜಾರಿಗೊಳಿಸಲಾಗಿದೆ. ನ್ಯಾಯಾಲಯದಲ್ಲಿರುವ, ತಡೆಯಾಜ್ಞೆಯಲ್ಲಿರುವ ಪ್ರಕರಣಗಳ ಒತ್ತುವರಿ ತೆರವು ಮಾಡಬೇಕೆಂದು ಈ ಹಿಂದೆ ಸೂಚಿಸಿದ್ದೆ. ಇಲಾಖಾ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಮಂಗಳೂರು ಅರಣ್ಯ ಒತ್ತುವರಿ ತೆರವು ಮುಕ್ತ ಆಗಬೇಕೆಂಬ ಉದ್ದೇಶವಿದೆ ಎಂದರು.