ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಕಳ್ಳಾಟ ನಿಲ್ಲುತ್ತಿಲ್ಲ. ಕೈದಿಗಳಿಂದಲೇ ರಾಜಾರೋಷವಾಗಿ ಜೈಲಿನಲ್ಲಿ ಮೊಬೈಲ್ ಮಾರಾಟ ನಡೆಯುತ್ತಿದ್ದು, ಜೈಲಿನಲ್ಲಿಯೇ ಇದರಿಂದ ಕೆಲವರು ಲಕ್ಷ ಲಕ್ಷ ಸಂಪಾದನೆ ಮಾಡುತ್ತಿದ್ದಾರೆ. ಈ ವರದಿ ಓದಿದರೆ, ಮೊಬೈಲ್ ಸಾಗಿಸಲು ಇಂಥ ಹಾದಿ ಹಿಡಿಯುವವರೇ ಎನ್ನುತ್ತೀರಾ.
Swiggy, Zomato ಕಾರ್ಮಿಕರಿಗೆ ಗುಡ್ ನ್ಯೂಸ್: ರಾಜ್ಯದ ಕಾರ್ಮಿಕರಿಗಾಗಿ ಹೊಸ ಮಸೂದೆ ಜಾರಿ!
ಕೈದಿಯೊಬ್ಬನ ಗುದದ್ವಾರದಲ್ಲಿ ಎರಡು ಮೊಬೈಲ್ ಸಿಕ್ಕಿವೆ. ಜೈಲಿನ ಒಳಗೆ ಬರುವಾಗ ಸ್ಕ್ಯಾನ್ ಮಾಡಿದಾಗ ಈ ವಿಚಾರ ಪತ್ತೆಯಾಗಿದೆ. ರಘುವೀರ್ ಎಂಬ ವಿಚಾರಣಾಧೀನ ಕೈದಿಯ ಗುದದ್ವಾರದಲ್ಲಿ ಎರಡು ಮೊಬೈಲ್ ಹಾಗೂ ಬ್ಯಾಟರಿ ಪತ್ತೆಯಾಗಿವೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಕರೆದುಕೊಂಡು ಹೋಗಿದ್ದ ಪೊಲೀಸರು ವಾಪಸ್ ಬರುವಾಗ ಯಾರಿಂದಲೋ ಹೇಗೋ ಕಣ್ಣು ತಪ್ಪಿಸಿ ಈತ ಮೊಬೈಲ್ ಪಡೆದಿದ್ದ. ಶ್ರೀಕೃಷ್ಣ ಎಂಬ ಪೊಲೀಸ್ ಪೇದೆ ರಘುವೀರ್ನನ್ನು ಕರೆದುಕೊಂಡು ಹೋಗಿದ್ದ. ವಾಪಸ್ ಬಂದಾಗ ಜೈಲಿನ ತಪಾಸಣೆ ವೇಳೆ ಸ್ಕ್ಯಾನ್ ಸೈರನ್ ಮಾಡಿತ್ತು. ಕೂಡಲೇ ರಘುವೀರ್ನನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ದು ಎಕ್ಸರೇ ಮಾಡಿದಾಗ ಪೊಲೀಸರಿಗೇ ಶಾಕ್ ಆಗಿತ್ತು.