ಬೆಂಗಳೂರು : ಸರ್ವರಿಗೂ ಸೂರು ಯೋಜನೆಯಡಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಬಡ ಕುಟುಂಬಗಳಿಗೆ ನಿರ್ಮಿಸಿ ಕೊಡುತ್ತಿರುವ 1,29,457 ಮನೆಗಳಿಗೆ ಫಲಾನುಭವಿಗಳ ವಂತಿಗೆ ಸರ್ಕಾರವೇ ಭರಿಸಿ ಹಂತ ಹಂತವಾಗಿ ಪೂರ್ಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಗೆ ನೀಡಿದ್ದಾರೆ.
Yuvanidhi Yojana: ಫಲಾನುಭವಿಗಳೇ ಗಮನಿಸಿ.. ಯುವನಿಧಿ ಯೋಜನೆಗೆ ಹೊಸ ರೂಲ್ಸ್..! ಈ ಕೆಲಸ ಮಾಡದಿದ್ರೆ ಹಣ ಬರಲ್ಲ
ಗೃಹ ಕಚೇರಿ ಕೃಷ್ಣಾ ದಲ್ಲಿ ನಡೆದ ವಸತಿ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ನಿರ್ಮಾಣ ದ ವಿವಿಧ ಹಂತದಲ್ಲಿ ಇರುವ 1,29,457 ಮನೆಗಳಿಗೆ ಎಷ್ಟು ಹಣಕಾಸು ಬೇಕಾಗುತ್ತದೆ. ಈ ವರ್ಷ ಗರಿಷ್ಠ ಎಷ್ಟು ಕೊಡಬಹುದು. ಮುಂದಿನ ವರ್ಷ ಎಷ್ಟು ಕೊಡಬಹುದು ಪರಿಶೀಲನೆ ಮಾಡುವಂತೆ ಹಣಕಾಸು ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿಯವರು ಸೂಚಿಸಿದರು.
ಫಲಾನುಭವಿಗಳಿಂದ 1 ಲಕ್ಷ ರೂ ಕಡ್ಡಾಯ
ಫಲಾನುಭವಿಗಳಿಂದ ಒಂದು ಲಕ್ಷ ರೂ. ಕಡ್ಡಾಯವಾಗಿ ಪಡೆಯಬೇಕು ಎಂದು ನಿರ್ದೇಶನ ನೀಡಿದರು. ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವುದಾಗಿ ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದರು. ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಎರಡನೇ ಹಂತದಲ್ಲಿ 39, 966 ಮನೆ ಹಂಚಿಕೆಗೆ ಸಿದ್ದವಿದ್ದು 862 ಕೋಟಿ ರೂ. ಅಗತ್ಯವಿದೆ. ಅದೇ ರೀತಿ ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ಮೊದಲ ಹಂತದಲ್ಲಿ ಹಂಚಿಕೆಗೆ 11,406 ಮನೆ ಸಿದ್ದವಿದ್ದು 1,879 ಕೋಟಿ ರೂ. ಅಗತ್ಯ ವಿದೆ ಎಂದು ಸಚಿವ ಜಮೀರ್ ಅಹಮದ್ ಖಾನ್ ಸಭೆಯಲ್ಲಿ ವಿವರಿಸಿದರು.
ಏನಿದು ಸರ್ವರಿಗೂ ಸೂರು ವಸತಿ ಯೋಜನೆ?
ಯೋಜನೆಯಡಿಯಲ್ಲಿ 2013 ರಿಂದ 2023 ರವರೆಗೆ ಮಂಜೂರು ಮಾಡಿದ್ದ ವಸತಿ ಯೋಜನೆ ಯಡಿ ಫಲಾನುಭವಿಗಳು ತಮ್ಮ ಪಾಲಿನ ವಂತಿಗೆ ಪಾವತಿ ಮಾಡಲು ಸಾಧ್ಯ ವಾಗದೆ 2.32 ಲಕ್ಷ ಮನೆಗಳ ನಿರ್ಮಾಣ ನೆನೆಗುದಿಗೆ ಬಿದ್ದಿತು. ಬಡ ಕುಟುಂಬಗಳ ಸಮಸ್ಯೆ ಯನ್ನು ವಸತಿ ಸಚಿವ ಜಮೀರ್ ಅಹಮದ್ ಖಾನ್ ಮುಖ್ಯಮಂತ್ರಿ ಯವರಿಗೆ ಮನವರಿಕೆ ಮಾಡಿಕೊಟ್ಟು ಪ್ರತಿ ಕುಟುಂಬದ ಫಲಾನುಭವಿ ವಂತಿಗೆ ನಾಲ್ಕು ಲಕ್ಷ ರೂ. ಸರ್ಕಾರವೇ ಭರಿಸುವ ತೀರ್ಮಾನ ಕೈಗೊಳ್ಳಲಾಗಿತ್ತು.
ಈ ಮೊದಲು ಕೊಳಗೇರಿ ಅಭಿವೃದ್ಧಿ ಮಂಡಳಿ ಯೋಜನೆಗೆ ಅನುಮತಿ ದೊರೆತಿತ್ತು. ಸಭೆಯಲ್ಲಿ ರಾಜೀವ್ ಗಾಂಧಿ ವಸತಿ ನಿಗಮದ ಯೋಜನೆ ಗೂ ಅನ್ವಯ ಮಾಡಲು ತಾತ್ವಿಕ ಒಪ್ಪಿಗೆ ದೊರೆಯಿತು.
ತ್ವರಿತವಾಗಿ ಕಾಮಗಾರಿ
ಕರ್ನಾಟಕ ಗೃಹ ಮಂಡಳಿಯಲ್ಲಿ ಭೂಸ್ವಾಧೀನ ಮಾಡಿಕೊಂಡ ಜಮೀನಿನಲ್ಲಿ ತ್ವರಿತವಾಗಿ ಕಾಮಗಾರಿ ಕೈಗೊಳ್ಳಬಹುದು. ಆದರೆ 50:50 ಅನುಪಾತದ ಹಂಚಿಕೆ ಆಧಾರದಲ್ಲಿ ಜಮೀನು ಪಡೆದುಕೊಂಡರೆ, ರೈತರಿಗೆ ಮರುಹಂಚಿಕೆ ಮಾಡುವ ಭೂಮಿಯ ಪರಿವರ್ತನೆಯಲ್ಲಿ ವಿಳಂಬವಾಗುತ್ತಿದ್ದು,ಈ ಬಗ್ಗೆ ನೋಂದಣಿ ಮತ್ತು ಮುದ್ರಾಂಕ, ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯವರೊಂದಿಗೆ ಚರ್ಚಿಸಿ, ಕ್ರಮ ಕೈಗೊಳ್ಳುವಂತೆ ಸಿದ್ದರಾಮಯ್ಯ ಸೂಚಿಸಿದರು.