ಬೆಂಗಳೂರು: ನಮ್ಮ 3 ಎಕ್ರೆ 16 ಗುಂಟೆ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಲಾಗಿದೆ. ಈ ಅಕ್ರಮ ಒತ್ತುವರಿಗೆ ನನಗೆ 62 ಕೋಟಿ ರೂ. ಕೊಡಬೇಕು ಎಂದು ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA) ಸೈಟ್ ಹಗರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಮ್ಮ 3 ಎಕ್ರೆ 16 ಗುಂಟೆ ಜಮೀನು ಒತ್ತುವರಿ ಮಾಡಿದ್ದಾರೆ. ಕಾನೂನು ಬಾಹಿರವಾಗಿ ಈ ಒತ್ತುವರಿ ನಡೆದಿದೆ. ನಾವು ಒತ್ತುವರಿ ಮಾಡಿದ್ದು ತಪ್ಪು ಎಂದು ಮುಡಾದವರೇ ಸಭೆಯಲ್ಲಿ ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.
BREAKING: ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್ʼಗೆ ಮತ್ತೆ ಜೈಲೇ ಗತಿ, ಎಲ್ಲಿ ತನಕ ಗೊತ್ತಾ?
ಮುಡಾದವರು ತಪ್ಪು ಮಾಡಿದ್ದಕ್ಕೆ ನಾನು ಯಾಕೆ ಹೊಣೆಗಾರನಾಗಬೇಕು. ನಮಗೆ ಇಲ್ಲೇ ಜಾಗ ನೀಡಬೇಕು ಎಂದು ಕೇಳಿಲ್ಲ. ನಾವೇನೂ ವಿಜಯನಗರದ 3-4 ಹಂತದಲ್ಲಿ ಕೊಡಿ ಎಂದು ಕೇಳಿದ್ದೀವಾ? ನಮಗೆ ಜಾಗ ಹಂಚಿಕೆಯಾಗಿದ್ದು 2021ರಲ್ಲಿ. 2021ರಲ್ಲಿ ಬಿಜೆಪಿ ಸರ್ಕಾರವೇ ಅಧಿಕಾರದಲ್ಲಿತ್ತು. ಅವರ ಸರ್ಕಾರ ಇರುವಾಗ ಹಂಚಿಕೆಯಾಗಿ ಈಗ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು.