ಶಿವಮೊಗ್ಗ : ರಾಜ್ಯದಲ್ಲಿ ಭರ್ಜರಿಯಾಗಿ ಮಳೆ ಆಗುತ್ತಿದೆ. ಈ ಹಿನ್ನೆಲೆ ಇಂದಿನಿಂದ ಹಸಿರುಮಕ್ಕಿ ಲಾಂಚ್ ಪುನರ್ ಆರಂಭಗೊಂಡಿದೆ. ಶರಾವತಿ ಹಿನ್ನಿರಿನ ಹಸಿರುಮಕ್ಕಿಯಲ್ಲಿ ಲಾಂಚ್ ಸೇವೆ ಇಂದಿನಿಂದ ಪುನರ್ ಆರಂಭ ಎಂದು ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಬಂದಿದೆ.
Yuvanidhi Yojana: ಫಲಾನುಭವಿಗಳೇ ಗಮನಿಸಿ.. ಯುವನಿಧಿ ಯೋಜನೆಗೆ ಹೊಸ ರೂಲ್ಸ್..! ಈ ಕೆಲಸ ಮಾಡದಿದ್ರೆ ಹಣ ಬರಲ್ಲ
ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಕುಸಿದ ಹಿನ್ನೆಲೆ ಲಾಂಚ್ ಸೇವೆ ಸ್ಥಗಿತ ಗೊಳಿಸಲಾಗಿತ್ತು. ಜಲಾಶಯಕ್ಕೆ ನೀರು ಹರಿದು ಬಂದ ಹಿನ್ನೆಲೆ ಲಾಂಚ್ ಸೇವೆ ಆರಂಭಗೊಂಡಿದೆ. ನಿಟ್ಟೂರು ಭಾಗದ ಜನರು ಸೇರಿದಂತೆ ಸಾಗರದಿಂದ ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ತೆರಳುವ ಭಕ್ತರಲ್ಲಿ ಖುಷಿಯಾಗಿದ್ದು, ಸದ್ಯ ಲಾಂಚ್ ಸೇವೆ ಆರಂಭದಿಂದ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.