ಕೋಲಾರ :ಕೋಚಿಮುಲ್ ನಿಂದ ಹಾಲು ಉತ್ಪಾದಕರಿಗೆ 2 ರೂಪಾಯಿ ಕಡಿತ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಕೋಲಾರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ತಲೆಯ ಮೇಲೆ ಕಲ್ಲು ಹೊತ್ತು, ಹಸುವಿನೊಂದಿಗೆ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ಹಾಲು ಉತ್ಪಾದನೆ ಹೆಚ್ಚಳ ನೆಪದಲ್ಲಿ ಕೋಚಿಮುಲ್ ಹಾಲು ಉತ್ಪಾದಕರಿಗೆ 2 ರೂಪಾಯಿ ಕಡಿತ ಆದೇಶ ವಾಪಸ್ ಪಡೆಯುವಂತೆ ಒತ್ತಾಯ ಮಾಡಿದರು. ರೈತರ ಹೆಸರಿನಲ್ಲಿ ಹಗಲು ದರೋಡೆ ಮಾಡುತ್ತಿರುವ ಕೋಚಿಮುಲ್ ಆಡಳಿತ ಮಂಡಳಿ ವಜಾಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದು,
ಕೂಡಲೇ ಕೋಚಿಮುಲ್ ಆಡಳಿತ ಮಂಡಳಿ ಆದೇಶ ವಾಪಸ್ ಪಡೆಯುವಂತೆ ಮೇವು, ಹಿಂಡಿ, ಬೂಸ, ಹಸುವಿನ ಸಗಣಿಯೊಂದಿಗೆ ಕೋಚಿಮುಲ್ ವಿರುದ್ದ ವಿಭಿನ್ನ ಪ್ರತಿಭಟನೆ ಮೂಲಕ ಆಕ್ರೋಶ ಹೊರ ಹಾಕಿದರು.