ಬೆಂಗಳೂರು: ಗ್ಯಾರಂಟಿ (Congress Guranntee) ಹೊಡೆತದಿಂದ ತಪ್ಪಿಸಿಕೊಳ್ಳಲು ರಾಜ್ಯ ಸರ್ಕಾರ ಇನ್ನೊಂದು ಮಾರ್ಗವನ್ನು ಹುಡುಕಿದೆ. ಪರಿಶಿಷ್ಟ ಜಾತಿ ಉಪ ಯೋಜನೆ (SCSP) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಗೆಂದು (TSP) ಬಜೆಟ್ನಲ್ಲಿ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲು ಸರ್ಕಾರ ಮುಂದಾಗಿದೆ.
ಹೌದು, ಗ್ಯಾರಂಟಿ ಯೋಜನೆ ಜಾರಿ ಮಾಡಿ ಈಗಾಗಲೇ ಸಾಕಷ್ಟು ಹೊಡೆತ ತಿಂದು ಅನುದಾನ ಹೊಂದಿಸಲು ಶ್ರಮ ಪಡುತ್ತಿರುವ ಸರ್ಕಾರ ಈಗ ಎಸ್ಸಿಎಸ್ಪಿ ಮತ್ತು ಟಿಎಸ್ಪಿಗೆ ಬಜೆಟ್ನಲ್ಲಿ ಮೀಸಲಿಟ್ಟ ಒಟ್ಟು ಹಣದಲ್ಲಿ14,282 ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲು ಅನುಮತಿ ನೀಡಿದೆ.
Dengue Effect: ಎಲ್ಲೆಂದರಲ್ಲಿ ಕಸ ಬಿಸಾಡುವವರಿಗೆ ಇನ್ಮುಂದೆ ದಂಡ ವಿಧಿಸಲಾಗುತ್ತೆ: ತುಷಾರ್ ಗಿರಿನಾಥ್
2024-25ನೇ ಆರ್ಥಿಕ ವರ್ಷದಲ್ಲಿ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಅಡಿಯಲ್ಲಿ ಮೀಸಲಿಟ್ಟ 39,121.46 ಕೋಟಿ ರೂ. ಹಣವನ್ನು ಖರ್ಚು ಮಾಡುವ ಪ್ರಸ್ತಾವವುಳ್ಳ ಕ್ರಿಯಾ ಯೋಜನೆಗೆ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ರಾಜ್ಯ ಅಭಿವೃದ್ಧಿ ಪರಿಷತ್ ಶುಕ್ರವಾರ ಅನುಮೋದನೆ ನೀಡಿದೆ.
ಯಾವ ಗ್ಯಾರಂಟಿಗೆ ಎಷ್ಟು ಹಣ ಮೀಸಲು?
ಯುವನಿಧಿ – 175 ಕೋಟಿ ರೂ.
ಶಕ್ತಿ – 1451 ಕೋಟಿ ರೂ.
ಗೃಹ ಲಕ್ಷ್ಮೀ – 7,881 ಕೋಟಿ ರೂ.
ಅನ್ನಭಾಗ್ಯ ನಗದು– 2,187 ಕೋಟಿ ರೂ.
ಗೃಹ ಜ್ಯೋತಿ- 2,585 ಕೋಟಿ ರೂ.
Dengue Effect: ಎಲ್ಲೆಂದರಲ್ಲಿ ಕಸ ಬಿಸಾಡುವವರಿಗೆ ಇನ್ಮುಂದೆ ದಂಡ ವಿಧಿಸಲಾಗುತ್ತೆ: ತುಷಾರ್ ಗಿರಿನಾಥ್
ಬಿಜೆಪಿ ಹಿಂದಿನಿಂದಲೂ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಅನುದಾನವನ್ನು ಗ್ಯಾರಂಟಿಗೆ ಬಳಸಲು ವಿರೋಧ ವ್ಯಕ್ತಪಡಿಸಿತ್ತು. ಎಸ್ಪಿ ಮತ್ತು ಟಿಎಸ್ಪಿಗೆ ಮೀಸಲಿಟ್ಟ ಹಣ ಆ ಸಮುದಾಯದ ಅಭಿವೃದ್ಧಿಗೆ ಮಾತ್ರ ಬಳಕೆಯಾಗಬೇಕೆಂಬ ನಿಯಮವಿದೆ. ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುವುದು ಎಷ್ಟು ಸರಿ ಎಂದು ಬಿಜೆಪಿ ಪ್ರಶ್ನೆ ಮಾಡಿತ್ತು.