ಕಾರವಾರ:- ಭಾರೀ ಮಳೆಯ ಕಾರಣದಿಂದ ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ನಾಳೆ ಜಿಲ್ಲೆಯ ನಾಲ್ಕು ತಾಲೂಕಿನಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
Virat Kohli: ಪತ್ನಿ ಜೊತೆ ಲಂಡನ್ ನಲ್ಲೇ ನೆಲೆಸಲಿದ್ದಾರಾ ಕಿಂಗ್ ಕೊಹ್ಲಿ!?
ಕಾರವಾರ, ಕುಮಟಾ, ಭಟ್ಕಳ, ಹೊನ್ನಾವರ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆದೇಶ ಹೊರಡಿಸಿದ್ದಾರೆ. ಆದ್ರೆ, ಶಿರಸಿ, ಸಿದ್ದಾಪುರ ಹಾಗೂ ಮುಂಡಗೋಡ ತಾಲೂಕಿನಲ್ಲಿ ಶಾಲಾ ಕಾಲೇಜ್ ಗೆ ರಜೆ ಇಲ್ಲ.
ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಹೀಗಾಗಿ ಜಿಲ್ಲಾಡಳಿ ಕಾಳಜಿ ಕೇಂದ್ರಗಳಲ್ಲಿ ತೆರೆದಿದೆ. ಅಲ್ಲದೇ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಿಂದ 35 ಜನರ ಎರಡು NDRF ತಂಡ ಸಹ ಉತ್ತರ ಕನ್ನಡ ಜಿಲ್ಲೆಗೆ ಬಂದಿದೆ.
ಇನ್ನು ಜಿಲ್ಲೆಯಲ್ಲಿ 439 ಪ್ರದೇಶಗಳಲ್ಲಿ ಗುಡ್ಡ ಕುಸಿತ ಸಾಧ್ಯತೆಯ ಬಗ್ಗೆ ಗುರುತು ಮಾಡಲಾಗಿದೆ. ಪ್ರವಾಹವನ್ನು ಎದುರಿಸಲು ಕಂದಾಯ ಇಲಾಖೆಯ ತಂಡ ತಯಾರಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂಟ್ರೋಲ್ ರೂಂ ಕೂಡ ತೆರೆಯಲಾಗಿದೆ. ಮಳೆಯ ಸಮಸ್ಯೆ ಸಂಭವಿಸಿದಾಗ 1950ಸಂಖ್ಯೆಗೆ ಜನರು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ತಿಳಿಸಿದ್ದಾರೆ.
ಇನ್ನು ಉಡುಪಿಯಲ್ಲೂ ಭಾರೀ ಮಳೆಯಾಗುತ್ತಿರುವುದುರಿಂದ ಮುಂಜಾಗ್ರತಾವಾಗಿ ಜಿಲ್ಲೆಯ ಎರಡು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕುಂದಾಪುರ, ಬ್ರಹ್ಮಾವರ ತಾಲೂಕಿನ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.