ತುಮಕೂರು:- ವಿದ್ಯುತ್ ಟ್ರಾನ್ಸ್ಫಾರ್ಮರ್ ಏರಿ ವ್ಯಕ್ತಿಯ ಹುಚ್ಚಾಟ ಮೆರೆದಿರುವಂತಹ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಸಾರ್ತುವಳ್ಳಿ ಬಳಿ ಜರುಗಿದೆ.
Karnataka Weather: ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ; ಕರಾವಳಿಗೆ ರೆಡ್ ಅಲರ್ಟ್!
ಬಸವರಾಜು ಹುಚ್ಚಾಟದ ಬಗ್ಗೆ ಸ್ಥಳೀಯರು ಬೆಸ್ಕಾಂ, ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಬರುವ ವೇಳೆಗೆ ಬಸವರಾಜುಗೆ ಕರೆಂಟ್ ಶಾಕ್ ಹೊಡೆದಿತ್ತು. ತಕ್ಷಣ ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದ್ದಾರೆ.
ಟ್ರಾನ್ಸ್ಫಾರ್ಮರ್ನಲ್ಲಿ ಸಿಲುಕಿ ನರಳಾಡುತ್ತಿದ್ದ ಬಸವರಾಜು ರಕ್ಷಣೆ ಮಾಡಲಾಗಿದೆ. ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ‘108’ ಆ್ಯಂಬುಲೆನ್ಸ್ನಲ್ಲಿ ತಿಪಟೂರು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.