ಹರಾರೆಯ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ಇಂದಿನಿಂದ ಭಾರತ vs ಝಿಂಬಾಬ್ವೆ T20 ಸರಣಿ ಶುರುವಾಗಲಿದೆ.
ಪಂದ್ಯವು ಭಾರತೀಯ ಕಾಲಮಾನ ಸಂಜೆ 4.30 ರಿಂದ ಶುರುವಾಗಲಿದೆ. ಐದು ಪಂದ್ಯಗಳ ಈ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಯುವ ಆಟಗಾರ ಶುಭ್ಮನ್ ಗಿಲ್ ಮುನ್ನಡೆಸಲಿರುವುದು ವಿಶೇಷ.
ಸ್ಪೈಸ್ಜೆಟ್ ಏರ್ಲೈನ್ಸ್ ವಿಮಾನದಲ್ಲಿ ತಾಂತ್ರಿಕ ದೋಷ: ವಿಮಾನದಲ್ಲಿ ಪ್ರಯಾಣಿಕರು ಲಾಕ್!
ಟಿ20 ವಿಶ್ವಕಪ್ ತಂಡದಲ್ಲಿದ್ದ ಬಹುತೇಕ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಹೀಗಾಗಿ ಝಿಂಬಾಬ್ವೆ ವಿರುದ್ಧದ ಸರಣಿಗೆ ಯಂಗ್ ಇಂಡಿಯಾವನ್ನು ಆಯ್ಕೆ ಮಾಡಲಾಗಿದೆ. ಅದರಂತೆ ಇದೇ ಮೊದಲ ಬಾರಿಗೆ ರಿಯಾನ್ ಪರಾಗ್, ಅಭಿಷೇಕ್ ಶರ್ಮಾ, ಹರ್ಷಿತ್ ರಾಣಾ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಟಿ20 ವಿಶ್ವಕಪ್ ತಂಡದಲ್ಲಿ ಮೀಸಲು ಆಟಗಾರರಾಗಿ ಕಾಣಿಸಿಕೊಂಡಿದ್ದ ರಿಂಕು ಸಿಂಗ್ ಹಾಗೂ ಖಲೀಲ್ ಅಹ್ಮದ್ ಈ ಸರಣಿಯಲ್ಲಿ ಕಣಕ್ಕಿಳಿಯುತ್ತಿದ್ದಾರೆ. ಹಾಗೆಯೇ ಮೂರನೇ ಪಂದ್ಯದ ವೇಳೆ ಸಂಜು ಸ್ಯಾಮ್ಸನ್, ಶಿವಂ ದುಬೆ ಹಾಗೂ ಯಶಸ್ವಿ ಜೈಸ್ವಾಲ್ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ.
ಇದಕ್ಕೂ ಮುನ್ನ ಈ ಮೂವರು ಸಂಪೂರ್ಣ ಸರಣಿಗೆ ಆಯ್ಕೆಯಾಗಿದ್ದರು. ಆದರೆ ಬಾರ್ಬಡೋಸ್ನಿಂದ ಭಾರತ ತಂಡ ತವರಿಗೆ ಮರಳು ವಿಳಂಬವಾಗಿದ್ದರಿಂದ ಈ ಮೂವರ ಬದಲಿಗೆ ಮೊದಲೆರಡು ಪಂದ್ಯಗಳಿಗೆ ಹರ್ಷಿತ್ ರಾಣಾ, ಸಾಯಿ ಸುದರ್ಶನ್ ಹಾಗೂ ಜಿತೇಶ್ ಶರ್ಮಾ ಅವರನ್ನು ಆಯ್ಕೆ ಮಾಡಲಾಗಿದೆ.