ಬಾಗಲಕೋಟೆ:- ಮಳೆಗಾಲದಲ್ಲಿ ಜಿಲ್ಲೆಯಲ್ಲಿ ಹೇಳಿಕೊಳ್ಳುವಂತಹ ಮಳೆಯೇನೂ ಆಗಿಲ್ಲ. ಇದರಿಂದ ರೈತರು ಕಂಗಾಲಾಗಿದ್ರು. ಅದ್ರಂತೆ ಕೃಷ್ಣಾ ನದಿ ತೀರದ ರೈತರು ಕೂಡ ತಲೆ ಮೇಲೆ ಕೈ ಇಟ್ಟು ಚಿಂತಿಸುವಂತಾಗಿತ್ತು. ಆದ್ರೆ ಮಹಾರಾಷ್ಟ್ರದ ಪಶ್ಷಿಮ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಅಧಿಕ ಮಳೆಯಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ.
ದರ್ಶನ್ಗೆ ಅಕ್ಟೋಬರ್ 28ವರೆಗೂ ಜಾಮೀನು ಅಸಾಧ್ಯ – ವಿದ್ಯಾ ಶಂಕರಾನಂದ ಸರಸ್ವತಿ ಭವಿಷ್ಯ!
ಇದರಿಂದ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ, ಜಮಖಂಡಿ, ಬೀಳಗಿ ತಾಲ್ಲೂಕಿನ ಕೃಷ್ಣಾ ತೀರದ ರೈತರ ಮೊಗದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ.
ಸದ್ಯ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಹಿಪ್ಪರಗಿ ಬಳಿ ಹರಿದಿರುವ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಹಿಪ್ಪರಗಿ ಬ್ಯಾರೇಜ್ ಅಧಿಕ ಪ್ರಮಾಣದ ನೀರು ಹರಿದು ಬರ್ತಿದೆ. ಹಿಪ್ಪರಗಿ ಬ್ಯಾರೇಜ್ ಗೆ ಸದ್ಯ 47,720 ಕ್ಯೂಸೆಕ್ ನೀರು ಹರಿದು ಬರ್ತಿದೆ. 6 ಟಿಎಂಸಿ ಸಾಮರ್ಥ್ಯದ ಹಿಪ್ಪರಗಿ ಬ್ಯಾರೇಜ್ ನಲ್ಲಿ 3.50 ಟಿಎಂಸಿ ನೀರು ಸಂಗ್ರಹಣವಿದೆ. ಬ್ಯಾರೇಜ್ ಗೆ ಅಧಿಕ ಪ್ರಮಾಣದ ನೀರು ಹರಿದು ಬರ್ತಿರೋ ಕಾರಣ ಹಿಪ್ಪರಗಿ ಬ್ಯಾರೇಜ್ ನಿಂದ 51,600 ಕ್ಯೂಸೆಕ್ ನೀರನ್ನು ನದಿಗೆ ಹೊರ ಬಿಡಲಾಗುತ್ತಿದೆ.
ಪ್ರಕಾಶ ಕುಂಬಾರ
ಬಾಗಲಕೋಟೆ