ಬೆಂಗಳೂರು: ವೇಗವಾಗಿ ಬೈಕ್ ಚಲಾಯಿಸಿದ (Bike Rider) ಸವಾರರೊಬ್ಬರು ರಾಜಕಾಲುವೆ (Rajakaluve) ಪಾಲಾದ ಘಟನೆ (Road Accident) ಕೆಂಗೇರಿಯಲ್ಲಿ (Kengeri) ನಡೆದಿದೆ. ಮೋರಿಗೆ ಬಿದ್ದು ನಾಪತ್ತೆಯಾಗಿರುವ ಬೈಕ್ ಸವಾರನನ್ನು ಬ್ಯಾಟರಾಯನಪುರದ ಹೇಮಂತ ಕುಮಾರ್ (27) ಎಂದು ಗುರುತಿಸಲಾಗಿದೆ.
ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ರಾತ್ರಿ ಸುಮಾರು 10:30ಕ್ಕೆ ಈ ದುರ್ಘಟನೆ ನಡೆದಿದೆ. ಜ್ಞಾನ ಭಾರತಿ ಮೆಟ್ರೋ ಸ್ಟೆಷನ್ ಬಳಿ ವೇಗವಾಗಿ ಬೈಕ್ ಚಲಾಯಿಸಿದ್ದರಿಂದ, ಬೈಕ್ ಡಿವೈಡರ್ಗೆ ಗುದ್ದಿದ ಪರಿಣಾಮ ಸವಾರ ಚಿಮ್ಮಿ ರಾಜಕಾಲುವೆ ಒಳಗೆ ಬಿದ್ದಿದ್ದಾರೆ. ಸಣ್ಣದಾಗಿ ಮಳೆ ಬರುತ್ತಿದ್ದುದರಿಂದ ಡಿವೈಡರ್ ಗುರುತಿಸಲು ಸಾಧ್ಯವಾಗಿರಲಿಕ್ಕಿಲ್ಲ.
Spicejet Airlines: ಸಿಬ್ಬಂದಿ ಎಡವಟ್ಟು: ವಿಮಾನದಲ್ಲೇ ಲಾಕ್ ಆದ ಪ್ರಯಾಣಿಕರು, ಮುಂದೇನಾಯ್ತು?
ಕೂಡಲೇ ಅಗ್ನಿಶಾಮಕದಳದ ಸಿಬ್ಬಂದಿಯನ್ನು ಕರೆಸಿ ಕಾರ್ಯಾಚರಣೆ ನಡೆಸಲಾಯಿತಾದರೂ, ಸವಾರನ ಪತ್ತೆಯಾಗಲಿಲ್ಲ. ರಾಜಕಾಲುವೆಯಲ್ಲಿ ಸುಮಾರು 4 ಅಡಿ ನೀರು ತುಂಬಿದ್ದು, ಈ ನೀರಿನಲ್ಲಿ ವ್ಯಕ್ತಿ ಕೊಚ್ಚಿ ಹೋಗಲು ಸಾಧ್ಯವೇ ಎಂಬ ಅನುಮಾನವೂ ಮೂಡಿದೆ. ಕಾರ್ಯಾಚರಣೆ ನೋಡಲು ಜನ ನಿಂತ ಪರಿಣಾಮ ರಾತ್ರಿ ಮೈಸೂರು ರೋಡ್ನಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು. ರಾತ್ರಿ ಶೋಧ ಸ್ಥಗಿತಗೊಂಡಿದ್ದು, ಬೆಳಗ್ಗೆ ಮತ್ತೆ ಪುನರಾರಂಭಗೊಂಡಿದೆ.
ಸ್ಥಳದಲ್ಲಿ ಅಪಘಾತದ ಬೈಕ್ ಹಾಗೂ ಚಪ್ಪಲಿ ಇದ್ದು, ಸ್ಥಳೀಯರ ಮಾಹಿತಿಯ ಮೇರೆಗೆ ರಾತ್ರಿ 12ಗಂಟೆಯವರೆಗೆ ಸ್ಥಳೀಯ ಪೊಲೀಸರು ಹಾಗೂ ಅಗ್ನಿ ಶಾಮಕ ಸಿಬ್ಬಂದಿಗಳು ಹುಡುಕಾಟ ನಡೆಸಿದರು.ಜ್ಞಾನ ಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.