ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಅಂತಾರಾಷ್ಟ್ರೀಯ ಮಟ್ಟದ ಈಜುಕೊಳದಲ್ಲಿ ಬೆಳ್ಳಂ ಬೆಳಗ್ಗೆ ಈಜಾಡಿ ರಿಲಾಕ್ಸ್ ಆಗಿದ್ದಾರೆ.
ಬೆಂಗಳೂರಲ್ಲಿ ರಾಜಕಾಲುವೆಗೆ ಬಿದ್ದ ಬೈಕ್ ಸವಾರ: ಪೊಲೀಸರಿಂದ ಶೋಧಕಾರ್ಯ!
ಶುಕ್ರವಾರದಿಂದ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿರೋ ಸಚಿವರು ಮಂಗಳೂರಿನ ಎಮ್ಮೆಕೆರೆ ಬಳಿ ಇರುವ ಸ್ವಿಮ್ಮಿಂಗ್ ಪೂಲ್ನಲ್ಲಿ ಸ್ವಿಮ್ಮಿಂಗ್ ಮಾಡಿದರು. 24.94 ಕೋಟಿ ರೂ. ವೆಚ್ಚದ ಎಮ್ಮೆಕೆರೆಯ ಅಂತಾರಾಷ್ಟ್ರೀಯ ಈಜುಕೊಳವನ್ನು ಕಳೆದ ವರ್ಷ ನ. 24ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಉದ್ಘಾಟಿಸಿದ್ದರು
ಸ್ಮಾರ್ಟ್ಸಿಟಿ ರಿವರ್ಫ್ರಂಟ್ ಯೋಜನೆಯ ತಡೆಗೋಡೆ ಕುಸಿತದ ಬಗ್ಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಗ್ರ ತನಿಖೆಯಾಗಿ, ವಾರದೊಳಗೆ ವರದಿ ಸಲ್ಲಿಸಬೇಕೆಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.