ಜಿಂಬಾಬ್ವೆ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತದ ಯುವ ಪಡೆ ಆತಿಥೇಯ ತಂಡದ ಬೌಲಿಂಗ್ ದಾಳಿಗೆ ನಲುಗಿ ಹೋಗಿದೆ. ಹರಾರೆಯಲ್ಲಿ ನಡೆಯುತ್ತಿರುವ ಜಿಂಬಾಬ್ವೆ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಜಿಂಬಾಬ್ವೆ ನೀಡಿರುವ 116 ರನ್ಗಳ ಗುರಿ ಬೆನ್ನಟ್ಟಿರುವ ಟೀಂ ಇಂಡಿಯಾ ಕೇವಲ 22 ರನ್ಗಳಿಗೆ ಪ್ರಮುಖ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಅದರಲ್ಲೂ ತಂಡದ ಇಬ್ಬರು ಬ್ಯಾಟರ್ಗಳು ಶೂನ್ಯಕ್ಕೆ ವಿಕೆಟ್ ಒಪ್ಪಿಸಿರುವುದು ಜಿಂಬಾಬ್ವೆಯ ಶಿಸ್ತುಬದ್ಧ ದಾಳಿಗೆ ಹಿಡಿದ ಕೈಗನ್ನಡಿಯಾಗಿದೆ. ಉಳಿದಂತೆ ಇನ್ನಿಬ್ಬರು ಬ್ಯಾಟರ್ಗಳು ಕೇವಲ ಒಂದಂಕಿಗೆ ಸುಸ್ತಾಗಿ ಪೆವಿಲಿಯನ್ ಸೇರಿಕೊಂಡಿದ್ದಾರೆ.
ಲಂಚಕ್ಕೆ ಬೇಡಿಕೆ: ಬಿಬಿಎಂಪಿ ಟೌನ್ ಪ್ಲಾನಿಂಗ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ..!
116 ರನ್ಗಳ ಗುರಿ ಬೆನ್ನಟ್ಟಿದ ಭಾರತದ ಪರ ಚೊಚ್ಚಲ ಪಂದ್ಯವನ್ನಾಡುತ್ತಿರುವ ಅಭಿಷೇಕ್ ಶರ್ಮಾ ಹಾಗೂ ನಾಯಕ ಶುಭ್ಮನ್ ಗಿಲ್ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಈ ವೇಳೆ ಇನ್ನಿಂಗ್ಸ್ ಆರಂಭಿಸಿದ ಅಭೀಷೇಕ್ ಶರ್ಮಾ 4 ಎಸೆತಗಳನ್ನು ಎದುರಿಸಿ ಯಾವುದೇ ರನ್ ಕಲೆಹಾಕದೆ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡರು. ಇದರೊಂದಿಗೆ ಚೊಚ್ಚಲ ಅಂತರಾಷ್ಟ್ರೀಯ ಪಂದ್ಯದಲ್ಲಿ ಕಳಪೆ ಆರಂಭ ಮಾಡಿದರು. ಆ ನಂತರ ಬಂದ ರುತುರಾಜ್ ಗಾಯಕ್ವಾಡ್ ಕೂಡ 7 ರನ್ ಬಾರಿಸಲಷ್ಟೇ ಶಕ್ತರಾದರು.
ನಂತರ 4ನೇ ಕ್ರಮಾಂಕದಲ್ಲಿ ಬಂದ ರಿಯಾನ್ ಪರಾಗ್ ಕೂಡ ಹೆಚ್ಚು ಹೊತ್ತು ನಿಲ್ಲದೆ ಬಿಗ್ ಶಾಟ್ ಆಡುವ ಯತ್ನದಲ್ಲಿ 2 ರನ್ಗಳಿಗೆ ಇನ್ನಿಂಗ್ಸ್ ಮುಗಿಸಿದರು. ವಾಸ್ತವವಾಗಿ ರಿಯಾನ್ ಪರಾಗ್ಗೂ ಇದು ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯವಾಗಿತ್ತು. ಚೊಚ್ಚಲ ಪಂದ್ಯವನ್ನು ಸ್ಮರಣೀಯವಾಗಿಸುವ ಅವಕಾಶ ಪಡೆದಿದ್ದ ರಿಯಾನ್ ಬೇಡದ ಶಾಟ್ ಆಡಿ ವಿಕೆಟ್ ಕೈಚೆಲ್ಲಿದರು. ಗೇಮ್ ಫಿನಿಶರ್ ಖ್ಯಾತಿಯ ರಿಂಕು ಸಿಂಗ್ ಕೂಡ ಕಳಪೆ ಶಾಟ್ಗೆ ಬೆಲೆ ತೆರಬೇಕಾಯಿತು. ಅಚ್ಚರಿಯಿಂದರೆ ವಿಕೆಟ್ಗಳ ಪತನದ ನಡುವೆ ಜವಬ್ದಾರಿಯುತ ಬ್ಯಾಟಿಂಗ್ ಮಾಡಬೇಕಿದ್ದ ರಿಂಕು ಸಿಕ್ಸರ್ ಬಾರಿಸುವ ಯತ್ನದಲ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು.