ಹುಬ್ಬಳ್ಳಿ: ನಗರದಲ್ಲಿ ಸಿಆರ್ಎಫ್ ಅನುದಾನದಲ್ಲಿ ಕೈಗೊಂಡಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸುವಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೂಚಿಸಿದರು.
ಗುಮ್ಮಟನಗರಿ ವಿಜಯಪುರದಲ್ಲಿ ಮತ್ತೊಮ್ಮೆ ಕಂಪಿಸಿದ ಭೂಮಿ; ಆತಂಕದಲ್ಲಿ ಜನ!
ನಗರದಲ್ಲಿಂದು ಏರ್ಪಡಿಸಿದ್ದ ವಿವಿಧ
ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಕೆಲವು ಕಡೆ ಭೂಸ್ವಾಧೀನ ಆಗಿಲ್ಲವೆನ್ನುವುದು ಸರಿಯಲ್ಲ. 6 ತಿಂಗಳಿಂದಇದನ್ನೇ ಕೇಳುತ್ತಿದ್ದೇನೆ. ಉಣಕಲ್, ತತ್ವದರ್ಶ ಆಸ್ಪತ್ರೆ ಸೇರಿ ವಿವಿಧೆಡೆ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ. ಭೂಸ್ವಾಧೀನ ಆಗದೇ ಇರುವ ಜಾಗ ಬಿಟ್ಟು ಬೇರೆಡೆ ಕಾಮಗಾರಿ ನಡೆಸಿ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ
ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಅವರಿಗೆ ಸೂಚಿಸಿದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ರಾಜ್ಯ ಹೆದ್ದಾರಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವರು, ಯಾವ ಕೆಲಸ ಆಗಿಲ್ಲವೋ ಅವುಗಳನ್ನು ಗಮನಕ್ಕೆ ತೆಗೆದುಕೊಂಡು ಬನ್ನಿ. ಕೆಲವೆಡೆ ಅನುದಾನ ಕೊಟ್ಟರೂ ಕೆಲಸ ಆಗುತ್ತಿಲ್ಲ ಏಕೆ? ರಾಷ್ಟ್ರೀಯ ಹೆದ್ದಾರಿಯ 15 ಕಾಮಗಾರಿಗಳು ಮಂದಗತಿಯಲ್ಲಿ ಸಾಗುತ್ತಿರುವುದು ಗಮನಕ್ಕಿದೆ ಎಂದರು.
ಕೆಲವು ಕಾಮಗಾರಿಗಳು ನಡೆದಿಲ್ಲ. ಅವುಗಳ ಬಗ್ಗೆ ಶಾಸಕರೊಂದಿಗೆ ಕುಳಿತುಕೊಂಡು ಚರ್ಚಿಸಿ ನಿರ್ಧರಿಸಬೇಕು. ಅಂಡರ್ಪಾಸ್, ಪಾದಚಾರಿ ಮಾರ್ಗ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಶೀಘ್ರವಾಗಿ ಕೈಗೆತ್ತಿಕೊಳ್ಳಬೇಕು. ಒಂದು ವೇಳೆ ಯಾವುದೇ ಅಡ್ಡಿ ಬಂದರೆ ನನ್ನ ಗಮನಕ್ಕೆ ತರಬೇಕು. ಈ ಕುರಿತು ಸಂಬಂಧಿಸಿದ ಸಚಿವರೊಂದಿಗೆ ಮಾತನಾಡುತ್ತೇನೆ ಎಂದು ಸಚಿವರು, ಅಧಿಕಾರಿಗಳಿಗೆ ತಿಳಿಸಿದರು. ವಿಧಾನಸಭೆ ಪ್ರತಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ, ಜಿಲ್ಲಾಧಿಕಾರಿ ದಿವ್ಯಪ್ರಭು ಸೇರಿದಂತೆ ವಿವಿಧ ಅಧಿಕಾರಿಗಳು ಮುಂತಾದವರಿದ್ದರು.