ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ (Dengue) ಮಹಾಮಾರಿಯ ಅಬ್ಬರ ಜೋರಾಗುತ್ತಿದೆ. ಪ್ರತಿನಿತ್ಯ ಮೂರ್ನಾಲ್ಕು ಸಾವು ಆಗುತ್ತಿದೆ. ಸರ್ಕಾರ ಮಾತ್ರ ಇನ್ನೂ ಸರಿಯಾದ ಮುಂಜಾಗ್ರತಾ ಕ್ರಮ ಕೈಗೊಳ್ಳದೇ ಬರೀ ಸಭೆ ಅಂತಾ ಸಮಯ ಕಳೆಯುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R.Ashok) ಸರ್ಕಾರದ ವಿರುದ್ಧ ಗುಡುಗಿದ್ದಾರೆ.
Karnataka Weather : ರಾಜಧಾನಿ ಬೆಂಗಳೂರಲ್ಲಿ ಗುಡುಗು ಸಹಿತ ಮಳೆ; ಕರಾವಳಿ, ಮಲೆನಾಡಿನಲ್ಲಿ ಮಳೆ ಮುಂದುವರಿಕೆ!
ಭಾನುವಾರ ಜಯನಗರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಡೆಂಗ್ಯೂ ರೋಗಿಗಳ ಆರೋಗ್ಯ ವಿಚಾರಿಸಿದ ಅವರು, ಸರ್ಕಾರ ಕೂಡಲೇ ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಮಾಡಬೇಕು. ಡೆಂಗ್ಯೂ ಟೆಸ್ಟಿಂಗ್ ನಿಂದ ಸಂಪೂರ್ಣ ಚಿಕಿತ್ಸೆಯ ಹೊಣೆ ಹೊರಬೇಕು. ಎಲ್ಲರಿಗೂ ಉಚಿತ ಚಿಕಿತ್ಸೆ ನೀಡಬೇಕು. ಜನರ ಪ್ರಾಣದ ರಕ್ಷಣೆಗೆ ಸರ್ಕಾರ ಹಣ ಬಿಡುಗಡೆ ಮಾಡಿ. ಎಲ್ಲ ಆಸ್ಪತ್ರೆಯಲ್ಲೂ ಕೊರೊನಾ ಮಾದರಿಯಲ್ಲಿ ಡೆಂಗ್ಯೂಗಾಗಿ ಬೆಡ್ಗಳ ವ್ಯವಸ್ಥೆ ಮಾಡಿಸಬೇಕು ಎಂದು ಆಗ್ರಹ ಪಡಿಸಿದ್ದಾರೆ.
ಸರ್ಕಾರವನ್ನ ಎಚ್ಚರಿಸುವ ಕೆಲಸ ವಿರೋಧ ಪಕ್ಷದ ನಾಯಕನಾಗಿ ಮಾಡಿದ್ದೇನೆ. ಈ ಸರ್ಕಾರವನ್ನ ಎಚ್ಚರಿಸದೇ ಹೋದರೆ ಯಾವ ಕೆಲಸವನ್ನೂ ಮಾಡೋದಿಲ್ಲ. ನಾಳೆಯಿಂದ ಇಡೀ ರಾಜ್ಯಾದ್ಯಂತ ನಮ್ಮ ಪಕ್ಷದ ನಾಯಕರು, ಶಾಸಕರು ಆಸ್ಪತ್ರೆಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಬಗ್ಗೆ ನಿಗಾವಹಿಲಿದ್ದಾರೆ ಎಂದು ತಿಳಿಸಿದ್ದಾರೆ.