ಬೆಂಗಳೂರು: ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ.ಪಡಿತರ ಚೀಟಿ ಯೋಜನೆ ಮೂಲಕ ಪಡಿತರ ಚೀಟಿದಾರರಿಗೆ ಪ್ರಮುಖ ಮಾಹಿತಿ ನೀಡುವಾಗ, ಪ್ರತಿ ತಿಂಗಳು ನಿರಂತರವಾಗಿ ಪಡಿತರ ಚೀಟಿ ಸೌಲಭ್ಯ ಪಡೆಯುತ್ತಿರುವವರು ಕಡ್ಡಾಯವಾಗಿ ಪಡಿತರ ಚೀಟಿಯಲ್ಲಿ ಇ-ಕೆವೈಸಿ ನವೀಕರಣವನ್ನು ಪೂರ್ಣಗೊಳಿಸಬೇಕು ಎಂದು ತಿಳಿಸಲಾಗಿದೆಬಹುತೇಕ ಎಲ್ಲಾ ಪಡಿತರ ಚೀಟಿದಾರರು ತಮ್ಮ ಪಡಿತರ ಚೀಟಿಯ ಇಕೆವೈಸಿಯನ್ನು ಪೂರ್ಣಗೊಳಿಸಿದ್ದಾರೆ ಮತ್ತು ಈಗಲೂ ಇಕೆವೈಸಿ ಮಾಡುವ ಕೆಲಸವನ್ನು ಆನ್ಲೈನ್ನಲ್ಲಿ ಮಾಡಲಾಗುತ್ತಿದೆ.ಇ-ಕೆವೈಸಿ ಮೂಲಕ ಪಡಿತರ ಚೀಟಿಯಲ್ಲಿ ವಿಶೇಷ ನವೀಕರಣಗಳನ್ನು ಮಾಡಲಾಗಿದೆ.
ಚನ್ನಪಟ್ಟಣ ಉಪ ಚುನಾವಣಾ ಕಣ: ಮೈತ್ರಿ ಅಭ್ಯರ್ಥಿ ಆಯ್ಕೆ ಇನ್ನೂ ಕಗ್ಗಂಟು!
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಗ್ರಾಹಕರ ಪಡಿತರ ಚೀಟಿಗಳ ಜೊತೆ ಆಧಾರ್ ಕಾರ್ಡ್ ಜೋಡಣೆ ದಿನಾಂಕವನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದೆ..
ರಾಜ್ಯದಲ್ಲಿ ಸಾವಿರಾರು ಫಲಾನುಭವಿಗಳು ತಮ್ಮ ಕುಟುಂಬದ ಸದಸ್ಯರ ಆಧಾರ್ ಜೋಡಣೆ ಮಾಡಿಲ್ಲ. ಹೀಗೆ ಮಾಡಲು ವಿಫಲ ಆದರೆ ಪಡಿತರ ಚೀಟಿಯಿಂದ ಅವರ ಹೆಸರನ್ನು ತೆಗೆದುಹಾಕಲಾಗುತ್ತದೆ. ಆದ್ದರಿಂದ ತಮ್ಮ ಪಡಿತರ ಚೀಟಿ ಜೊತೆ ಆಧಾರ್ ಕಾರ್ಡ್ ಜೋಡಣೆ ಮಾಡದವರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಸರ್ಕಾರ ದಿನಾಂಕ ವಿಸ್ತರಣೆ ಮಾಡಿದ್ದು, ಇದನ್ನು ಮೊದಲು ಜೂನ್ 30ಕ್ಕೆ ನಿಗದಿ ಮಾಡಲಾಗಿತ್ತು.
ಇದೀಗ ಮತ್ತೊಮ್ಮೆ ರಾಜ್ಯ ಸರ್ಕಾರವು ದಿನಾಂಕವನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಣೆ ಮಾಡಿದೆ. ಹಾಗಾಗಿ ಯಾರೆಲ್ಲ ಇದುವರೆಗೆ ಪಡಿತರ ಚೀಟಿಗೆ ಜೊತೆ ಆಧಾರ್ ಕಾರ್ಡ್ ಜೋಡಣೆ ಮಾಡಿಲ್ಲವೋ ಕೂಡಲೇ ಲಿಂಕ್ ಮಾಡಿಸಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು ಎಂದು ತಿಳಿಸಿದೆ.