ಬೆಂಗಳೂರು: 20 ವರ್ಷದ ರಾಜಕಾರಣದಲ್ಲಿ ನಾನು ಎಂದೂ ಮದ್ಯ ಹಂಚಿ ರಾಜಕಾರಣ ಮಾಡಿಲ್ಲ ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ನೂತನ ಸಂಸದ ಡಾ.ಕೆ.ಸುಧಾಕರ್ ಗೆ (Dr Sudhakar) ನೆಲಮಂಗಲದಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಬಾಡೂಟದ ಜೊತೆಯಲ್ಲಿ ಮದ್ಯ ಹಂಚಿದ್ದಾರೆಂಬ ಆರೋಪ ಕೇಳಿಬಂದಿತ್ತು. ಈ ಕುರಿತು ಚಿಕ್ಕಬಳ್ಳಾಪರ ಜಿಲ್ಲಾಡಳಿತ ಭವನದ ಸಂಸದರ ಕಚೇರಿಯಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಸಿ ಮಾತನಾಡಿದ ಡಾ.ಕೆ.ಸುಧಾಕರ್, ಈ ಬಗ್ಗೆ ನನಗೇನೂ ಗೊತ್ತಿಲ್ಲ. ಮಾಧ್ಯಮಗಳಲ್ಲಿ ಬಂದ ನಂತರ ಘಟನೆ ಬಗ್ಗೆ ತಿಳಿಯಿತು. ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ನನಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಆಯೋಜನೆ ಮಾಡಿದ್ರು ಎಂದರು.
https://ainlivenews.com/good-news-for-ration-card-holders-from-the-state-government-aadhaar-link-extended-till-september-30/
ನಾನು ಹಾಗೂ ಆರ್ ಆಶೋಕ್ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ಸಭೆಯಲ್ಲಿ ಮಾತನಾಡಿ ಬಂದೆ. ಆದರೆ ಮದ್ಯ ಹಂಚಿಕೆ ಮಾಡಿದ್ದು ಆಯೋಜಕರಾ..? ಅಥವಾ ಅಲ್ಲಿ ಬಂದಿದ್ದೇವರೇ ಸೇವನೆ ಮಾಡಿದ್ರಾ ಎಂಬುದರ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳಿದರು