ಬೆಂಗಳೂರು:- ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಶಾಸ್ತ್ರಿ’ ಸಿನಿಮಾ ಮರು ಬಿಡುಗಡೆ ಮಾಡಲು ಗಾಂಧಿನಗರದಲ್ಲಿ ತಯಾರಿ ನಡೆದಿದೆ
ಬಿಸಿ ಪಾಟೀಲ್ ಅಳಿಯನ ಸೂಸೈಡ್ ಕೇಸ್: ನಿಜಕ್ಕೂ ಇದು ಆತ್ಮಹತ್ಯೆಯಾ!? – ಎಸ್ಪಿ ಹೇಳಿದ್ದೇನು!?
ವಿತಕರ ವಿ.ಎಂ. ಶಂಕರ್ ಅವರು ಈ ಸಿನಿಮಾವನ್ನು ರೀ-ರಿಲೀಸ್ ಮಾಡುತ್ತಿದ್ದಾರೆ. ಆದರೆ ಇದು ಸಡನ್ ಪ್ಲ್ಯಾನ್ ಅಲ್ಲ ಎಂದು ಅವರು ಹೇಳಿದ್ದಾರೆ. ‘ಈ ವಾರ ಕನ್ನಡದ ಬೇರೆ ಯಾವ ಸಿನಿಮಾ ಕೂಡ ಬಿಡುಗಡೆ ಆಗುತ್ತಿಲ್ಲ. ಹಾಗಾಗಿ ಚಿತ್ರಮಂದಿರದ ಮಾಲೀಕರು ರೀ-ರಿಲೀಸ್ ಮಾಡಿ ಅಂತ ಮನವಿ ಮಾಡಿಕೊಂಡಿದ್ದಾರೆ. ರಾಜ್ಯಾದ್ಯಂತ 25ರಿಂದ 50 ಚಿತ್ರಮಂದಿರಗಳಲ್ಲಿ ‘ಶಾಸ್ತ್ರಿ’ ಸಿನಿಮಾ ಬಿಡುಗಡೆ ಮಾಡುತ್ತೇವೆ. ಗಲಭೆ ಆಗಬಹುದು ಅಂತ ಕೆಲವು ಚಿತ್ರಮಂದಿರದ ಮಾಲಿಕರು ಯೋಚನೆ ಮಾಡುತ್ತಿದ್ದಾರೆ. ದರ್ಶನ್ ಜೈಲಿಗೆ ಹೋಗಿದ್ದಕ್ಕೂ ‘ಶಾಸ್ತ್ರಿ’ ಮರು ಬಿಡುಗಡೆ ಮಾಡುತ್ತಿರುವುದಕ್ಕೂ ಯಾವುದೇ ಸಂಬಂಧ ಇಲ್ಲ ಎಂದರು