ಬೆಂಗಳೂರು: ನಗರದಲ್ಲಿ ಬೆಳ್ಳಂ ಬೆಳಗ್ಗೆ ಸಿಲಿಂಡರ್ ಸ್ಫೋಟಗೊಂಡಿದ್ದು ಘಟನೆಯಲ್ಲಿ ಐವರಿಗೆ ಗಂಭೀರ ಗಾಯವಾಗಿರುವ ಘಟನೆ ಕುಮಾರಸ್ವಾಮಿ ಲೇಔಟ್ ನಲ್ಲಿ ನಡೆದಿದೆ.
ರಾಜ್ಯದಲ್ಲಿ ಡೆಂಗ್ಯೂ ನರ್ತನ: ದಿನೇ ದಿನೇ ಹೆಚ್ಚಾಗುತ್ತಿರುವ ಕೇಸ್, ಇದಕ್ಕೆಲ್ಲಾ ಪರಿಹಾರ ಯಾವಾಗ?
ಸಿಲಿಂಡರ್ ಬ್ಲಾಸ್ಟ್ʼನಲ್ಲಿ ಗಾಯಗೊಂಡ ಗಾಯಾಳುಗಳನ್ನ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಾಕೇಶ್ , ಕೃಷ್ಣ , ಹರಿರಾಮ್ , ರಾಮ್ ಧನ್ , ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರು..
ಮೂಲತಃ ಉತ್ತರ ಪ್ರದೇಶದವರಾಗಿದ್ದು ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದರು.. ಬೆಳಗ್ಗೆ ಕೆಲಸಕ್ಕೆ ಹೋಗಲು ತಿಂಡಿ ಸಿದ್ದತೆ ಮಾಡುತ್ತಿದ್ದಾಗ ಸಿಲಿಂಡರ್ ಬ್ಲಾಸ್ಟ್ ಆಗಿದೆ