ಟಿ20 ವಿಶ್ವಕಪ್ ಜಯದ ಬಳಿಕ ಟೀಂ ಇಂಡಿಯಾ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಉಡುಪಿಯ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.ಪತ್ನಿ ದೇವಿಶಾ ಶೆಟ್ಟಿ ಜೊತೆಗೆ ಮಾರಿಗುಡಿ ದೇವಸ್ಥಾನಕ್ಕೆ ಕ್ರಿಕೆಟಿಗ ಸೂರ್ಯಕುಮಾರ್ ಭೇಟಿ ನೀಡಿದ್ದರು. ಈ ವೇಳೆ ಸ್ಟಾರ್ ಕ್ರಿಕೆಟರ್ಗೆ ಭವ್ಯ ಸ್ವಾಗತ ಕೋರಲಾಯಿತು.
ಕೊಹ್ಲಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ವಿರಾಟ್ ಬಾಲ್ಯದ ಕೋಚ್ ಹೇಳಿದ್ದೇನು?
ದೇವಸ್ಥಾನ ಭೇಟಿ ನೀಡಿದ ಬಳಿಕ ಸೂರ್ಯ ಕುಮಾರ್ ಯಾದವ್ ಮಾತನಾಡಿ. ಈ ವೇಳೆ ಟೀಂ ಇಂಡಿಯಾದ ನಾಯಕತ್ವದ ಬಗ್ಗೆ ಪ್ರಶ್ನಿಸಿದ್ದಕ್ಕೆ ಉತ್ತರಿಸಿದ್ದಾರೆ. ‘ಅದು ನಮ್ಮ ಕೈಯಲ್ಲಿಲ್ಲ. ದೇಶಕ್ಕಾಗಿ ಚೆನ್ನಾಗಿ ಆಡುವುದು ಮಾತ್ರ ನಮ್ಮ ಗುರಿ. ದೇವರು ಇಚ್ಛಿಸಿದರೆ ಹಣೆಯಲ್ಲಿ ಬರೆದಂತೆ ಆಗುತ್ತದೆ’ ಎಂದು ಹೇಳಿದ್ದಾರೆ.
ನಾನೊಬ್ಬ ಸಾಮಾನ್ಯ ವ್ಯಕ್ತಿಯಾಗಿ ಬಂದಿದ್ದೇನೆ. ನಾನು ಯಾವುದೇ ಸೆಲೆಬ್ರಿಟಿಯಾಗಿ ಬಂದಿಲ್ಲ. ನಾನೊಬ್ಬ ಸೆಲೆಬ್ರಿಟಿ ಎಂಬ ಆಲೋಚನೆ ನನಗೆ ಬಂದಿಲ್ಲ. ಸಾಮಾನ್ಯ ವ್ಯಕ್ತಿಯಾಗಿ ದೊಡ್ಡ ಜೀವನವನ್ನು ಸಾಗಿಸಬೇಕಾಗಿದೆ. ವರ್ಲ್ಡ್ ಕಪ್ ಅನ್ನೋದು ಇಡೀ ಜೀವನ ಅಲ್ಲ ಅದೊಂದು ಭಾಗ ಎಂ ಹೇಳಿದ್ದಾರೆ.