ಕರಾವಳಿ ಭಾಗದಲ್ಲಿ ದರೋಡೆ, ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿವೆ. ಒಂಟಿ ಮನೆಗಳು, ವೃದ್ದರಿರುವ ಮನೆಗಳನ್ನು ಟಾರ್ಗೆಟ್ ಮಾಡಿ ದರೋಡೆ ನಡೆಯುತ್ತಿವೆ. ಇಂದು ಮುಂಜಾನೆ ಮಂಗಳೂರಿನ ಕೊಟ್ಟಾರದ ಬಳಿಯಿರುವ ಮನೆಯೊಂದಕ್ಕೆ ನುಗ್ಗಿದ ಗ್ಯಾಂಗ್ ದರೋಡೆ ನಡೆಸಿದೆ. ಮನೆಯಲ್ಲಿ ಹಿರಿಯರಿದ್ದು, ಮಕ್ಕಳು ವಿದೇಶದಲ್ಲಿದ್ದಾರೆ. ಮನೆಯವರಿಗೆ ಮಾರಕಾಯುಧ ತೋರಿಸಿ ಬೆದರಿಸಿ ದರೋಡೆ ಕೃತ್ಯ ನಡೆಸಿದ್ದಾರೆ. ಬಳಿಕ ಮನೆಯ ಕಾರಿನ ಕೀ ಪಡೆದು ಆ ಕಾರಿನಲ್ಲಿ ಉಡುಪಿಯತ್ತ ತೆರಳಿದ್ದಾರೆ.
ಉರ್ವಸ್ಟೋರ್ ಕೋಟೆಕಣಿ ಒಂದನೇ ಕ್ರಾಸ್ ನ ಮನೆಯೊಂದಕ್ಕೆ ಮಂಗಳವಾರ ಮುಂಜಾನೆ ಕಳ್ಳರು ನುಗ್ಗಿದ ಘಟನೆ ವರದಿಯಾಗಿದೆ . ನಗರದಲ್ಲಿ ಕ್ರಮಿನಲ್ ಚಟುವಟಿಕೆ ಹೆಚ್ಚಾಗುತ್ತಿದ್ದು, ಮತ್ತೊಂದು ದರೋಡೆ ಪ್ರಕರಣ ನಡೆದಿದೆ. ಹಿರಿಯ ನಾಗರಿಕರಿದ್ದ ಮನೆಗೆ ನುಗ್ಗಿ ಬೆದರಿಸಿ ಚಿನ್ನಾಭರಣ ಲೂಟಿ ಮಾಡಲಾಗಿದೆ. ಬಳಿಕ ಮನೆಯಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ದರೋಡೆಕೋರರು ಎಸ್ಕೇಪ್ ಆಗಿದ್ದಾರೆ. ನಸುಕಿನ ಜಾವ 3.30 ಕ್ಕೆ ಉರ್ವ ಕೊಟ್ಟರದ ಮನೆಯಲ್ಲಿ ಈ ದರೋಡೆ ನಡೆದಿದ್ದು,
ನಿಮ್ಮ ದೇಹದ ತೂಕವನ್ನು ಕಡಿಮೆ ಮಾಡಲು ಇಲ್ಲಿದೆ ನೋಡಿ ಸಿಂಪಲ್ ಟಿಪ್ಸ್..!
ಕಾರು ಮುಲ್ಕಿಯಲ್ಲಿ ಪತ್ತೆಯಾಗಿದೆ. ಮನೆಯಲ್ಲಿ ಹಿರಿಯ ನಾಗರಿಕರಿದ್ದು ಅವರ ಮಕ್ಕಳು ವಿದೇಶದಲ್ಲಿ ಇದ್ದಾರೆ. ಇದನ್ನು ಅರಿತೇ ಈ ದರೋಡೆ ನಡೆಸಿರುವ ಸಾದ್ಯತೆ ಇದೆ ಎಂದು ತಿಳಿದುಬಂದಿದೆ. ಬಿಟ್ಟು ಹೋದ ಕಾರಿನಲ್ಲಿ ಮೊಬೈಲ್ ಒಂದು ಪತ್ತೆಯಾಗಿದ್ದು ಪೊಲೀಸರು ತನಿಕೆ ನಡೆಸುತ್ತಿದ್ದಾರೆ. ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಸಿ ಲೂಟಿ ಮಾಡಿ ಕಾರು ಕೀ ಪಡೆದಿದ್ದಾರೆ ಎಂದು ಮನೆಯವರು ದೂರಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.