ಬೆಂಗಳೂರು: ಕೊಲೆ ಆರೋಪಿ ನಟ ದರ್ಶನ್ (Actor Darshan) ವಿಚಾರಣಾಧೀನ ಕೈದಿ ನಂಬರ್ ಅನ್ನು ಆಟೋ ಮೇಲೆ ಬರೆಸಿಕೊಂಡು ವ್ಹೀಲಿಂಗ್ ಮಾಡಿದ್ದ ಆಟೋ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಜಗದೀಶ್ ಬಂಧಿತ ಆಟೋ ಚಾಲಕ. ಆರೋಪಿ ಜಗದೀಶ್ ಮೂಲತಃ ಹಾಸನದ ಹೊಳೆನರಸೀಪುರದವನಾಗಿದ್ದು, ಬೆಂಗಳೂರಿನಲ್ಲಿ ಆಟೋ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ.
ರಾಮನಗರ ಜಿಲ್ಲೆಯನ್ನು ಬೆಂಗಳೂರಿಗೆ ಸೇರಿಸುತ್ತಿರೋದ್ಯಾಕೆ?: ಕಾರಣಗಳು ಇಲ್ಲಿದೆ ನೋಡಿ!
ದರ್ಶನ್ ವಿಚಾರಣಾಧೀನ ಕೈದಿ ನಂಬರ್ 6106 ಅನ್ನು ಆಟೋ ಹಿಂದೆ ಬರೆಸಿಕೊಂಡು ಕಾಣುವಂತೆ ನಡುರಸ್ತೆಯಲ್ಲಿ ವ್ಹೀಲಿಂಗ್ ಮಾಡಿದ್ದ. ವಾಟಾಳ್ ನಾಗರಾಜ್ ರಸ್ತೆ ಅಂಡರ್ ಪಾಸ್ ಬಳಿ ಜಗದೀಶ್ ವ್ಹೀಲಿಂಗ್ ಮಾಡಿ, ವೀಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದ.
ವ್ಹೀಲಿಂಗ್ ವೀಡಿಯೋ ವೈರಲ್ ಆಗುತ್ತಿದ್ದಂತೆ ಉತ್ತರದ ವಿಭಾಗದ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆಟೋ ಚಾಲಕ ಜಗದೀಶ್ನನ್ನು ಬಂಧಿಸಿದ್ದಾರೆ. ಬಂಧಿತ ಆಟೋ ಚಾಲಕನಿಂದ ವ್ಹೀಲಿಂಗ್ ಮಾಡಿದ್ದ ಆಟೋ ಸೀಜ್ ಮಾಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.