ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಬಗ್ಗೆ ಡಾಲಿ ಧನಂಜಯ್ ಕೊನೆಗೂ ಮೌನ ಮುರಿದಿದ್ದಾರೆ
BPL Card: ಹೊಸ ಬಿಪಿಎಲ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಅವಕಾಶ!
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಅವರು ಅರೆಸ್ಟ್ ಆಗಿದ್ದಾರೆ. ಅವರನ್ನು ಕೇಂದ್ರ ಕಾರಾಗೃಹದಲ್ಲಿ ಇಡಲಾಗಿದೆ. ದರ್ಶನ್ ಈ ರೀತಿಯ ಕೃತ್ಯ ಮಾಡಿಲ್ಲ ಎಂದು ಕೆಲವರು ಹೇಳಿದರೆ, ಇನ್ನೂ ಕೆಲವರು ತಪ್ಪು ನಡೆದಿದ್ದರೆ ಶಿಕ್ಷೆ ಆಗಲಿ ಎಂದು ಹೇಳಿದ್ದಾರೆ.
ಈ ಮೊದಲು ‘ಕೋಟಿ’ ಸಿನಿಮಾ ಸಂದರ್ಭದಲ್ಲಿ ಪ್ರಕರಣದ ಬಗ್ಗೆ ಡಾಲಿ ಧನಂಜಯ್ ಅವರಿಗೆ ಕೇಳಿದಾಗ ‘ಸಿನಿಮಾ ಬಗ್ಗೆ ಮಾತನಾಡೋಣ’ ಎಂದಿದ್ದರು. ಈಗ ಅವರಿಗೆ ಮತ್ತೆ ಇದೇ ಪ್ರಶ್ನೆ ಎದುರಾಗಿದೆ. ಈ ಬಗ್ಗೆ ಅವರು ಮಾತನಾಡಿದ್ದಾರೆ. ‘ತಪ್ಪು ನಡೆದಿದ್ದರೆ ಶಿಕ್ಷೆ ಆಗಲಿ. ನಡೆದ ಕೃತ್ಯನ್ನು ಯಾರೂ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಬದುಕು ಅವಕಾಶಗಳನ್ನು ಕೊಟ್ಟೇ ಕೊಡುತ್ತದೆ ಎಂದರು.