ಮುಂಬೈ: ಮಹಿಳೆಯೊಬ್ಬಳ ಸಾವಿಗೆ ಕಾರಣವಾಗಿದ್ದ ಬಿಎಂಡಬ್ಲ್ಯೂ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗೆ ಮದ್ಯ ನೀಡಿದ್ದ ಮುಂಬೈನ ಪಬ್ನ್ನು ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಬಕಾರಿ ಇಲಾಖೆ ಅಧಿಕಾರಿಗಳು ಪಬ್ನ್ನು ಸೀಲ್ ಮಾಡಿದ್ದರು. ಇದಾದ 24 ಗಂಟೆಗಳಲ್ಲಿ ಅಧಿಕಾರಿಗಳು ಪಬ್ ಮೇಲೆ ಬುಲ್ಡೋಜರ್ ಅಸ್ತ್ರ ಪ್ರಯೋಗಿಸಿದ್ದಾರೆ.
ಪಬ್ 25 ವರ್ಷ ವಯಸ್ಸಿನ ಮತ್ತು ಕುಡಿಯಲು ಕಾನೂನುಬದ್ಧ ವಯೋಮಿತಿಗಿಂತ ಕಡಿಮೆ ವಯಸ್ಸಿನ ಆರೋಪಿ ಮಿಹಿರ್ ಶಾಗೆ (24) ಮದ್ಯವನ್ನು ನೀಡಿದೆ. ಅಲ್ಲದೇ ಸರಿಯಾದ ಪರವಾನಗಿ ಇಲ್ಲದೆ ಮದ್ಯ ಮಾರಾಟ ಮಾಡಿದ್ದು ಕಂಡು ಬಂದಿದೆ. ಬಾಂಬೆ ವಿದೇಶಿ ಮದ್ಯದ ನಿಯಮಗಳ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅತಿಯಾಗಿ ಬೆವರುವುದರಿಂದ ಕೂದಲು ಉದುರುತ್ತೆ ಅನ್ನೋದು ನಿಮಗೆ ಗೊತ್ತಿದ್ಯಾ.? ಇಲ್ಲಿದೆ ಮಾಹಿತಿ
ಈ ಪ್ರಕರಣದ ಪ್ರಮುಖ ಆರೋಪಿ ಮಿಹಿರ್ ಶಾನನ್ನು ಮಂಗಳವಾರ ಸಂಜೆ ಬಂಧಿಸಲಾಗಿತ್ತು. ಆರೋಪಿ ಮತ್ತು ಆತನ ತಾಯಿ, ಇಬ್ಬರು ಸಹೋದರಿಯರು ಸೇರಿದಂತೆ ಒಟ್ಟು 12 ಜನರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಶಿವಸೇನಾ ಬಣದ ಮುಖಂಡ ರಾಜೇಶ್ ಶಾ ಅವರ ಮಗ ಕೃತ್ಯದ ಬಳಿಕ ಪರಾರಿಯಾಗಿದ್ದ. ಆರೋಪಿ ಪತ್ತೆಗೆ ಬಲೆ ಬೀಸಿದ್ದ ಪೊಲೀಸರು ಮೂರು ದಿನಗಳ ಬಳಿಕ ಬಂಧಿಸಿದ್ದರು. ಆರೋಪಿ ತಪ್ಪಿಸಿಕೊಳ್ಳಲು ತಾಯಿ ಮತ್ತು ಸಹೋದರಿಯರು ಶಾಗೆ ಸಹಾಯ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.