ಬೆಂಗಳೂರು:- ಖ್ಯಾತ ಕನ್ನಡ ನಿರೂಪಕಿ ಅಪರ್ಣಾ ಕೊನೆಯುಸಿರೆಳೆದಿದ್ದಾರೆ.
ಪ್ರೀತಿಯ ಮಡದಿ ಸಾವಿನ ಬಗ್ಗೆ ಅಪರ್ಣಾ ಪತಿ ನಾಗರಾಜ್ ವಸ್ತಾರೆ ಮಾಹಿತಿ ನೀಡಿದ್ದಾರೆ. ಅಪರ್ಣಾ ಇನ್ನಿಲ್ಲ ಅನ್ನೋ ವಿಚಾರವನ್ನು ಬಹಳ ನೋವಿನಿಂದಲೇ ಹಂಚಿಕೊಂಡಿದ್ದಾರೆ.
Gold Price: ಮತ್ತೆ ಚಿನ್ನದ ಬೆಲೆ ಏರಿಕೆ; ಹಳದಿ ಲೋಹ ಗ್ರಾಮ್ಗೆ 20 ರೂನಷ್ಟು ಹೆಚ್ಚಳ!
ನನ್ನ ಪ್ರೀತಿಯ ಮಡದಿ ಅರ್ಪಣಾ ಇಹ ಲೋಕ ತ್ಯಜಿಸಿದ್ದಾರೆ. ಕೆಲ ಹೊತ್ತಿನ ಹಿಂದೆ ಸಾವನ್ನಪ್ಪಿದ್ದಾರೆ.ಕಳೆದ ಎರಡು ವರುಷದಿಂದ ಶ್ವಾಸಕೋಶ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ನಾಲ್ಕನೇ ಸ್ಟೇಜ್ ಕ್ಯಾನ್ಸರ್ ಚಿಕಿತ್ದೆ ಪಡೆಯುತ್ತಿದ್ದರು. ಕ್ಯಾನ್ಸರ್ ವಿರುದ್ಧ ಹೋರಾಟದಲ್ಲಿ ನಾವು ಸೋತಿದ್ದೇವೆ ಎಂದು ಅಪರ್ಣಾ ಅವರ ಪತಿ ಕಣ್ಣೀರಿಟ್ಟಿದ್ದಾರೆ.
ಅಂತಿಮ ದರ್ಶನಕ್ಕೂ ವ್ಯವಸ್ಥೆ ಮಾಡುತ್ತೇವೆ ಎಂದು ಅಪರ್ಣಾ ಪತಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಮುಂದಿನ ಕಾರ್ಯಗಳ ಬಗ್ಗೆಯೂ ಮಾಹಿತಿ ನೀಡಿದ್ದಾರೆ.
ಹಲವು ದಶಕಗಳ ಕಾಲ ನಿರೂಪಣೆಯಲ್ಲಿ ತೊಡಗಿಸಿಕೊಂಡಿದ್ದಲ್ಲೆ ಅಪರ್ಣಾ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದರು. 1984 ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ಅವರ ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದರು. ನಂತರ ಇನ್ಸ್ಪೆಕ್ಟರ್ ವಿಕ್ರಮ್ ಮೊದಲಾದ ಚಿತ್ರಗಳಲ್ಲಿ ನಟಿಸಿದರು.