ನವದೆಹಲಿ: ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಸಂಸದೆಯೂ ಆಗಿರುವ ನಟಿ ಕಂಗನಾ ರಣಾವತ್ ತಮ್ಮನ್ನು ಭೇಟಿ ಮಾಡಲು ಬಯಸುವವರು ಕಡ್ಡಾಯವಾಗಿ ಆಧಾರ್ ಕಾರ್ಡ್ ತನ್ನಿ ಎಂದು ಹೇಳಿ ಭಾರೀ ಟೀಕೆಗೆ ಗುರಿಯಾಗಿದ್ದಾರೆ. ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಹಾಗೂ ಹೊರಗಿನವರು ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹೊಸ ನಿಯಮ ಜಾರಿಗೊಳಿಸುತ್ತಿರುವುದಾಗಿ ಕಂಗನಾ ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಮಂಡಿ ಕ್ಷೇತ್ರದಲ್ಲಿದ್ದರೆ ನಿಯೋಜಿತವಾದ ಸಂವಾದ ಕೇಂದ್ರದಲ್ಲಿ ಸಂದರ್ಶಕರನ್ನ ಭೇಟಿ ಮಾಡುವುದಾಗಿ ತಿಳಿಸಿದ್ದಾರೆ.
ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಶುಭ ಸುದ್ದಿ: ಶೀಘ್ರದಲ್ಲಿಯೇ 10 ಸಾವಿರ ಶಿಕ್ಷಕರ ನೇಮಕ – ಮಧು ಬಂಗಾರಪ್ಪ
ಹಿಮಾಚಲ ಪ್ರದೇಶದ ದೊಡ್ಡ ಸಂಖ್ಯೆಯ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಹೆಚ್ಚಿನ ಪ್ರವಾಸಿಗರು ಬರುವುದರಿಂದ ಕ್ಷೇತ್ರದ ಜನರಿಗೆ ಅನಾನುಕೂಲ ಆಗಬಹುದು. ಹಾಗಾಗಿ ಕ್ಷೇತ್ರದ ಜನ ಆಧಾರ್ ಕಾರ್ಡ್ ಹೊಂದುವುದು ಕಡ್ಡಾಯವಾಗಿದೆ. ಕ್ಷೇತ್ರದ ಯಾವುದೇ ಕೆಲಸಕ್ಕೆ ಸಂಬಂಧಿಸಿದ ವಿವರವನ್ನು ಒಂದು ಪತ್ರದಲ್ಲಿ ಬರೆದುಕೊಡಬೇಕು. ಇದರಿಂದ ಪ್ರತಿಯೊಬ್ಬರ ಮನೆಗೆ ಭೇಟಿ ನೀಡಿ ಸಮಸ್ಯೆ ಬಗೆಹರಿಸುವುದು ಸುಲಭವೂ ಆಗುತ್ತದೆ. ಜೊತೆಗೆ ಅನಾನುಕೂಲವಾಗದಂತೆ ಎಚ್ಚರ ವಹಿಸಬಹುದು ಎಂದೂ ಅವರು ಹೇಳಿದ್ದಾರೆ.