ಬೆಂಗಳೂರು: ತಮಿಳುನಾಡಿಗೆ ನೀರು ಬಿಡುವಂತೆ CWRC ಆದೇಶ ಹಿನ್ನೆಲೆಯಲ್ಲಿ ಇಂದು ಸರ್ವಪಕ್ಷ ಸಭೆ ಕರೆದ ರಾಜ್ಯ ಸರ್ಕಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಂಜೆ4 ಗಂಟೆಗೆ ನಡೆಯಲಿರುವ ಸಭೆರಾಜ್ಯದ ಕೇಂದ್ರ ಸಚಿವರು,ಕಾವೇರಿ ಜಲಾನಯನ ಪ್ರದೇಶದ ಶಾಸಕರು,ಸಚಿವರಿಗೆ ಸಭೆಗೆ ಆಹ್ವಾನ ನೀಡಿರುವ ಸರ್ಕಾರ
ವಾಲ್ಮೀಕಿ ನಿಗಮ ಅಕ್ರಮ: ತನಿಖೆಗೆ ನಮ್ಮ ತಕರಾರಿಲ್ಲ ಎಂದ ಜಿ ಪರಮೇಶ್ವರ್!
ಈಗಾಗಲೇ CWRC ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸುವ ಬಗ್ಗೆ ತೀರ್ಮಾನ ಮಾಡಿರುವ ಸರ್ಕಾರಈ ಕುರಿತು ಸಾಧಕ-ಬಾಧಕ ಬಗ್ಗೆ ಸಭೆಯಲ್ಲಿ ಚರ್ಚೆಮುಂದಿನ ಕಾನೂನು ಹೋರಾಟ, ಪದೇ ಪದೇ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಬಗ್ಗೆ ಚರ್ಚೆ ಮಾಡಲಿರುವ ಸರ್ವಪಕ್ಷ ನಾಯಕರು ಅಗತ್ಯ ಬಿದ್ರೆ ಪ್ರಧಾನಿ ಭೇಟಿಗೆ ಮುಂದಾಗಲಿರುವ ರಾಜ್ಯ ನಾಯಕರ ನಿಯೋಗ
CWRC ಜುಲೈ 12 ರಿಂದ ಪ್ರತಿ ದಿನ ಒಂದು ಟಿಎಂಸಿ ನೀರು ಬಿಡುಗಡೆ ಮಾಡುವಂತೆ ತಿಳಿಸಿದ್ದಾರೆ. ಸರ್ಕಾರ ಈ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸಬೇಕೆಂದಿದ್ದಾರೆ.
ಕೇಂದ್ರ ಮಂತ್ರಿಗಳು, ಕಾವೇರಿ ಭಾಗದ ಲೋಕಸಭೆ, ರಾಜ್ಯಸಭೆ ಸದಸ್ಯರು ಮತ್ತು ಶಾಸಕರನ್ನು ಸಹ ಸಭೆಗೆ ಆಹ್ವಾನಿಸಲಾಗುವುದು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರದ ಮುಂದಿನ ಹೆಜ್ಜೆಯನ್ನು ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು.