ವಿಜಯನಗರ: ವಿಜಯನಗರ ಜಿಲ್ಲೆಯ ಹಡಗಲಿ ತಾಲೂಕಿನ ದುಂಗಾವತಿ ತಾಂಡದಲ್ಲಿ ಬಹಿರ್ದೆಸೆಗೆ ಹೋದ 10 ವರ್ಷದ ಬಾಲಕಿ ಅನುಮಾನಾಸ್ಪವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಬಹಿರ್ದೆಸೆಗೆ ಹೋಗಿದ್ದ ಬಾಲಕಿ ತುಂಬ ಹೊತ್ತಾದರೂ ಮರಳಿರಲಿಲ್ಲ. ಇದರಿಂದ ಆಕೆಯನ್ನು ಹುಡುಕಿಕೊಂಡು ಹೋದಾಗ ಮೃತದೇಹ ಪತ್ತೆಯಾಗಿತ್ತು. ಬಾಲಕಿಯ ಮೃತದೇಹ ಹೊಂಡದ ಪಕ್ಕದಲ್ಲಿ ಮತ್ತು ತಂಬಿಕೆ ಮತ್ತೊಂದು ಕಡೆ ಬಿದ್ದಿತ್ತು ಎಂದು ಆಕೆಯ ತಂದೆ ತಿಳಿಸಿದ್ದಾರೆ.
ಕೂಡಲೇ ಬಾಲಕಿಯನ್ನು ಹಗರಿಬೊಮ್ಮನಹಳ್ಳಿ ತಾಲೂಕಿನ ಹಂಪಸಾಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ತರಲಾಗಿತ್ತು. ಆದರೆ ಅಷ್ಟೊತ್ತಿಗಾಗಲೇ ಬಾಲಕಿ ಮೃತಪಟ್ಟಿದ್ದಾಳೆ. ಒಬ್ಬಳೇ ಮಗಳನ್ನು ಪಾಪಿಗಳು ಕೊಂದಿದ್ದಾರೆ ಎಂದು ಪೋಷಕರು ಕಣ್ಣೀರಿಟ್ಟಿದ್ದಾರೆ. ಬಾಲಕಿ ಸಾವಿಗೆ ಕಾರಣ ಇನ್ನೂ ನಿಗೂಢವಾಗಿದೆ.
Vaastu Tips: ಮನೆಯೊಳಗೆ ಪೊರಕೆಯನ್ನು ಹೀಗೆ ಇಟ್ಟರೆ ಲಕ್ಷ್ಮಿ ಕೃಪೆ ಸಿಗುತ್ತಂತೆ!
ತಮ್ಮ ಮಗಳಿಗೆ ಆದ ಅನ್ಯಾಯ ಬೇರೆಯವರಿಗೆ ಆಗಬಾರದು. ಮಗಳ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಎಸ್ಪಿ ಶ್ರೀಹರಿಬಾಬು, ಶಾಸಕ ಕೃಷ್ಣ ನಾಯ್ಕ್ ಮತ್ತಿತರರು ಭೇಟಿ ನೀಡಿದ್ದಾರೆ. ಬಹಿರ್ದೆಸೆಗೆ ಹೋದ 10 ವರ್ಷದ ಬಾಲಕಿ ಅನುಮಾನಾಸ್ಪವಾಗಿ ಮೃತಪಟ್ಟಿರುವ ಘಟನೆ ಹಡಗಲಿ ತಾಲೂಕಿನ ದುಂಗಾವತಿ ತಾಂಡದಲ್ಲಿ ನಡೆದಿದೆ. ಶನಿವಾರ ಸಂಜೆ ಬಾಲಕಿಯ ಮೃತದೇಹ ಪತ್ತೆಯಾಗಿದೆ. ತಂಬ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.