ಮಂಡ್ಯ: ಬೆಂಗಳೂರಿನಲ್ಲಿ ಕಸ ತೆಗೆಯಲು ಬ್ಲಾಕ್ ಲಿಸ್ಟ್ನಲ್ಲಿ ಇರುವ ಗುತ್ತಿಗೆದಾರನಿಗೆ ಸಚಿವರೊಬ್ಬರು ಟೆಂಡರ್ ಕೊಟ್ಟಿದ್ದಾರೆ. 30 ವರ್ಷಕ್ಕೆ ಲೀಸ್ಗೆ (ಬೋಗ್ಯ) ಕೊಟ್ಟಿದ್ದಾರೆ. 45 ಸಾವಿರ ಕೋಟಿ ರೂ.ಗೆ ಟೆಂಡರ್ ಕೊಟ್ಟು, 15 ಸಾವಿರ ಕೋಟಿ ರೂ. ಕಿಕ್ ಬ್ಯಾಕ್ ಪಡೆಯಲು ಪೆನ್ನು ಪೇಪರ್ ಪಡೆದವರು ಮುಂದಾಗಿದ್ದಾರೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಮಂಡ್ಯದ ಪಾಂಡವಪುರ ಪಟ್ಟಣದಲ್ಲಿ ತಮಗೆ ನಡೆದ ಅಭಿನಂದನಾ ಹಾಗೂ ಕೃತಜ್ಞತಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕಸ ಎತ್ತಲು ಬ್ಲಾಕ್ ಲಿಸ್ಟ್ನಲ್ಲಿ ಇರುವ ಗುತ್ತಿಗೆದಾರನಿಗೆ ಟೆಂಡರ್ ಕೊಟ್ಟಿದ್ದಾರೆ. 30 ವರ್ಷಕ್ಕೆ ಲೀಸ್ಗೆ (ಬೋಗ್ಯ) ಕೊಟ್ಟಿದ್ದಾರೆ.
Vaastu Tips: ಮನೆಯೊಳಗೆ ಪೊರಕೆಯನ್ನು ಹೀಗೆ ಇಟ್ಟರೆ ಲಕ್ಷ್ಮಿ ಕೃಪೆ ಸಿಗುತ್ತಂತೆ!
ಅದರಲ್ಲೂ 15 ಸಾವಿರ ಕೋಟಿ ರೂ. ಕಿಕ್ ಬ್ಯಾಕ್ ತೆಗೆದುಕೊಂಡಿದ್ದಾರೆ. 45 ಸಾವಿರ ಕೋಟಿ ರೂ.ಗೆ ಟೆಂಡರ್ ಕೊಟ್ಟು, 15 ಸಾವಿರ ಕೋಟಿ ರೂ. ಕಿಕ್ ಬ್ಯಾಕ್ ಪಡೆಯಲು ಪೆನ್ನು ಪೇಪರ್ ಪಡೆದವರು ಮುಂದಾಗಿದ್ದಾರೆ. 30 ವರ್ಷಕ್ಕೆ ನಾವು ನೀವು ಬದುಕಿರುತ್ತೀವೋ ಇಲ್ಲವೋ ಎಂದು ಬಾಂಬ್ ಸಿಡಿಸಿದ್ದಾರೆ.