ಮಂಡ್ಯ: ಬೀದಿಗಳಿಗೆ ಚರಂಡಿ ಇಲ್ಲದೆ ನಡು ರಸ್ತೆಯಲ್ಲಿ ಮಳೆ ನೀರು ನಿಂತು ಗ್ರಾಮಸ್ಥರು ಪರದಾಡುವಂತಹ ಸ್ಥಿತಿ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಮರಟಿಕೊಪ್ಪಲು ಗ್ರಾಮ ನಡೆದಿದೆ. ಸುಮಾರು ನೂರಕ್ಕೂ ಹೆಚ್ಚು ಕುಟುಂಬ, ಪುಟ್ಟ ಮಕ್ಕಳು ಸೇರಿ ಒಂದು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇರುವ ಗ್ರಾಮವಾಗಿದ್ದು, ಮೂಲಭೂತ ಸೌಕರ್ಯಗಳ ಒದಗಿಸದೆ ಗಬ್ಬೆದ್ದು ನಾರುತ್ತಿದೆ.
ರಸ್ತೆಯ ಇಕ್ಕೇಲಗಳಲ್ಲಿ ಮತ್ತು ಮನೆಯ ಮುಂಭಾಗ ತ್ಯಾಜ್ಯಗಳು ನಿಂತಿದಿದ್ದು, ಸೊಳ್ಳೆಯಿಂದ ಡೇಂಘಿ ಹೆಚ್ಚಳವಾಗುತ್ತಿದ್ದರು, ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕಾದ ಅಧಿಕಾರಿಗಳು ನಾಪತ್ತೆಯಾಗಿದ್ದಾರೆ. ಕಾಮಗಾರಿ ಪೂರ್ಣ ಮಾಡದೆ ಅರ್ಧಕ್ಕೆ ನಿಲ್ಲಿಸಿರುವ ಗುತ್ತಿಗೆದಾರನ ವಿರುದ್ಧ ಸೂಕ್ತ ಕ್ರಮಕ್ಕೆ ಗ್ರಾಮಸ್ಥರು ಆಗ್ರಹಿಸಿದ್ದು, ಸೊಳ್ಳೆಯ ಕಚ್ಚುವಿಕೆಯಿಂದಾಗಿ ಮಕ್ಕಳು ಶೀತ, ನೆಗಡಿ, ಕೆಮ್ಮು, ಜ್ವರ ಕಾಣಿಸಿಕೊಳ್ಳುತ್ತಿದೆ ಎಂದು ಮೌಖಿಕವಾಗಿ ಅಧಿಕಾರಿಗಳಿಗೆ ತಿಳಿಸಿದ್ದಾರೆ.
Pomegranate Juice: ದಿನಕ್ಕೊಂದು ಗ್ಲಾಸ್ ದಾಳಿಂಬೆ ಜ್ಯೂಸ್ ಕುಡಿಯುವುದರಿಂದ ಈ ಕಾಯಿಲೆಗಳು ಹತ್ತಿರವೂ ಸುಳಿಯಲ್ಲ!
ಲಕ್ಷಾಂತರ ಹಣ ವೆಚ್ಚದ ಮೇಜರ್ ವಾಟರ್ ಟ್ಯಾಂಕ್ ಕಾಮಗಾರಿ ಮುಗಿದಿದ್ದರು ಅರ್ಧಕ್ಕೆ ನಿಂತಿದೆ. ನಿಂತ ನೀರು ಗಬ್ಬೆದ್ದು ನಾರುತ್ತಾ ರಸ್ತೆಯಲ್ಲಿ ಸೊಳ್ಳೆಗಳು ಉತ್ಪತಿಯಾಗುತ್ತಿದ್ದರೂ ಸಹ ಗ್ರಾಮಕ್ಕೆ ಆರೋಗ್ಯಾಧಿಕಾರಿಗಳು ಬೇಟಿ ನೀಡಿ ಸಮಸ್ಯೆ ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ. ಗ್ರಾಮದ ಮುಖ್ಯ ರಸ್ತೆಗಳಲ್ಲಿ ನೀರು ನಿಲ್ಲದಂತೆ ಮಾಡಿ ಬ್ಲೀಚಿಂಗ್ ಪೌಡರ್ ಹಾಕಿ ಸೊಳ್ಳೆಗಳನ್ನು ನಿಯಂತ್ರಿಸಲು ಔಷಧಿ ಸಿಂಪಡಿಸಬೇಕು. ತಕ್ಷಣವೇ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಗ್ರಾಮಸ್ಥರ ಮನವಿ ಮಾಡಿದ್ದಾರೆ.