ಬೆಂಗಳೂರು: ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನ (Karnataka Assembly Session) ಇಂದಿನಿಂದ ಆರಂಭವಾಗಿದೆ. ಪರಿಷತ್ನಲ್ಲಿ ಮೊದಲ ದಿನವೇ ಹಗರಣಗಳ ಸದ್ದು ಪ್ರಸ್ತಾಪವಾಗಿದೆ. ಅಧಿವೇಶನದಲ್ಲಿ ಕಲಾಪ ಆರಂಭಗೊಳ್ಳುತ್ತಿದ್ದಂತೆ ವಾಲ್ಮೀಕಿ ನಿಗಮದ ಹಗರಣ (Valmiki Corporation Corruption) ವಿಚಾರ ಪ್ರಸ್ತಾಪವಾಗಿದೆ.
ಗೃಹಜ್ಯೋತಿ ಸ್ಕೀಂ: ವಿದ್ಯುತ್ ಶಕ್ತಿ ಉತ್ಪಾದನೆ ಕಂಪನಿಗಳಿಗೆ ಆರ್ಥಿಕ ಸಂಕಷ್ಟ: ಪರಿಷತ್ ಶಾಸಕ ಟಿ.ಎ.ಶರವಣ
ವಿಧಾನ ಪರಿಷತ್ನಲ್ಲಿ ಜೆಡಿಎಸ್ನ ಭೋಜೇಗೌಡ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಸಭಾಪತಿ ಘೋಷಣೆ ಮಾಡಿದರು. ಬಳಿಕ ನಿಯಮ 59ರ ಅಡಿ ನಿಲುವಳಿ ಸೂಚನೆಗೆ ಪ್ರಸ್ತಾಪಿಸಲಾಯಿತು.ಈ ವೇಳೆ ಬಿಜೆಪಿ ಸದಸ್ಯ ಸಿ.ಟಿ ರವಿ (CT Ravi), ವಾಲ್ಮೀಕಿ ನಿಗಮದ ಹಗರಣ ಕುರಿತು ನಿಲುವಳಿ ಮಂಡಿಸಿದರು. ಇದಕ್ಕೆ ದನಿಗೂಡಿಸಿದ ಬಿಜೆಪಿ ಸದಸ್ಯ ರವಿಕುಮಾರ್ ಸಹ ವಾಲ್ಮೀಕಿ ಹಗರಣದ 187 ಕೋಟಿ ರೂ. ಹಣವನ್ನು ಬಳ್ಳಾರಿ ಚುನಾವಣೆ (Bellary Lok Sabha Election) ಹಾಗೂ ತೆಲಂಗಾಣ ಚುನಾವಣೆಗೆ ಬಳಕೆ ಮಾಡಲಾಗಿದೆ. ದೊಡ್ಡ ಈ ಬಗ್ಗೆ ದೊಡ್ಡ ಚರ್ಚೆಗೆ ಅವಕಾಶ ಕೊಡಿ ಎಂದು ಆಗ್ರಹಿಸಿದರು.
ಇದೇ ವೇಳೆ ಸಿ.ಟಿ ರವಿ ಸಹ, 187 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಆಗಿದೆ. ಈ ಬಗ್ಗೆ ಚರ್ಚೆಗೆ ಅವಕಾಶ ಕೊಡಿ. ಅಹಿಂದ ರಾಜಕಾರಣ ಮಾಡೋರು ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಹಣ ನುಂಗಿದ್ದಾರೆ. ಈ ಬಗ್ಗೆ ಚರ್ಚೆ ಆಗಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಭಾಪತಿ, ನಿಯಮದ ಪ್ರಕಾರ ನಾವು ಎಲ್ಲದಕ್ಕೂ ಸಮಯ ಕೊಡುತ್ತೇವೆ. ಪ್ರಶ್ನೋತ್ತರ ಅವಧಿ ಆದ್ಮೇಲೆ ವಿಷಯ ಪ್ರಸ್ತಾಪಕ್ಕೆ ಅವಕಾಶ ಕೊಡ್ತೀನಿ ಎಂದು ಹೇಳಿದರು.