ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗ್ತಿದೆ ಕರ್ನಾಟಕ ರಾಜ್ಯದಲ್ಲಿ ವಿದ್ಯುತ್ ಸರಬರಾಜು ಮಾಡುತ್ತಿರುವ ಕಂಪನಿಗಳು ಸಂಕಷ್ಟದಲ್ಲಿ ಇವೆ, ಇದರ ಕುರಿತಂತೆ ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಟಿ. ಎ. ಶರವಣ ಅವರು ಪ್ರಶ್ನಿಸಿದರು.
ಗೃಹ ಜ್ಯೋತಿ ಯೋಜನೆಗಳ ಮೂಲಕ ಉಚಿತ ವಿದ್ಯುತ್ ಶಕ್ತಿ ನೀಡುತ್ತಿರುವ ರಾಜ್ಯ ಸರ್ಕಾರ ವಿದ್ಯುತ್ ಸರಬರಾಜು ಮಾಡುತ್ತಿರುವ ಕಂಪನಿಗಳ ಕಷ್ಟವನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ.
KSRTC ಪ್ರಯಾಣಿಕರಿಗೆ ಗುಡ್ ನ್ಯೂಸ್: ಬಸ್ ಟಿಕೆಟ್ ದರ ಏರಿಕೆ ಸದ್ಯಕ್ಕಿಲ್ಲ: ಸಾರಿಗೆ ಸಚಿವರ ಸ್ಪಷ್ಟನೆ!
ವಿದ್ಯುತ್ ಶಕ್ತಿ ಉತ್ಪಾದನೆ ಮಾಡುತ್ತಿರುವ ಕಂಪನಿಗಳು ಆರ್ಥಿಕವಾಗಿ ಸಂಕಷ್ಟವನ್ನು ಎದುರಿಸುತ್ತಿದೆ. ಹಾಗೂ ಸರ್ಕಾರದಿಂದ ಯಾವುದೇ ರೀತಿಯ ಸಹಕಾರವು ಕೂಡ ಇವರಿಗೆ ದೊರೆಯುತ್ತಿಲ್ಲ.
ಹಲವು ಬಾರಿ ಲಿಖಿತ ರೂಪದಲ್ಲಿ ಪತ್ರ ಬರೆದರೂ ಯಾವುದೇ ರೀತಿಯ ಸೂಕ್ತ ಕ್ರಮಗಳನ್ನು ಕೂಡ ಕೈಗೊಳ್ಳುತ್ತಿಲ್ಲ ಎಂದು ಶರವಣ ಅವರು ತಿಳಿಸಿದರು ಮತ್ತು ಕೈಗೊಂಡಿರುವ ಗೃಹ ಜ್ಯೋತಿ ಯೋಜನೆಗೆ ಸರ್ಕಾರದಿಂದ ಉತ್ಪಾದನಾ ಕಂಪನಿಗಳಿಗೆ ಹಣ ಪಾವತಿಯಾಗುತ್ತಿಲ್ಲವೆಂದು ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಶರವಣ ಅವರು ಗಂಭೀರವಾಗಿ ಆರೋಪಿಸಿದರು.