ನವದೆಹಲಿ: ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಶುಕ್ರವಾರ ಹಸೆಮಣೆ ಏರಿದರು. ಮದುವೆ ಸಮಾರಂಭ ನಡೆಯುತ್ತಿದ್ದ ಸ್ಥಳದಲ್ಲಿ ಬಾಂಬ್ ಇಟ್ಟಿರುವ ಕುರಿತು ಬೆದರಿಕೆ ಹಾಕಲಾಗಿತ್ತು. ಪೊಲೀಸರು ಕೂಡಲೇ ಸನ್ನದ್ಧರಾಗಿ ಭದ್ರತೆಯನ್ನು ಹೆಚ್ಚಿಸಿದ್ದರು.
ಅವರ ಮದುವೆಗೆ ಬಾಂಬ್ ಬೆದರಿಕೆ ಹಾಕುವ ಪೋಸ್ಟ್ ಮಾಡಿದ್ದಕ್ಕಾಗಿ ಮುಂಬೈ ಪೊಲೀಸರು ಗುಜರಾತ್ನ 32 ವರ್ಷದ ಇಂಜಿನಿಯರ್ ಅನ್ನು ಬಂಧಿಸಿದ್ದಾರೆ. ಏಷ್ಯಾದ ಶ್ರೀಮಂತ ವ್ಯಕ್ತಿ ಮುಕೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಜುಲೈ 12 ರಂದು ಕೈಗಾರಿಕೋದ್ಯಮಿಗಳಾದ ವೀರೇನ್ ಮತ್ತು ಶೈಲಾ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ ಅವರನ್ನು ವಿವಾಹವಾದರು.
Bitter Gourd: ಎಚ್ಚರ..! ಹಾಗಲಕಾಯಿ ತಿಂದ ನಂತರ ಅಪ್ಪಿತಪ್ಪಿಯೂ ಈ ವಸ್ತುಗಳನ್ನು ತಿನ್ನಬೇಡಿ!
ಈ ಸಮಾರಂಭದಲ್ಲಿ ದೇಶದ ಮತ್ತು ವಿಶ್ವದ ಅನೇಕ ದೊಡ್ಡ ವ್ಯಕ್ತಿಗಳು ಭಾಗವಹಿಸಿದ್ದರು. ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ನಲ್ಲಿರುವ (BKC) ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ನಲ್ಲಿ ವಿವಾಹ ಸಮಾರಂಭವನ್ನು ಆಯೋಜಿಸಲಾಗಿತ್ತು.
ಬಾಂಬ್ ಬೆದರಿಕೆಯೊಡ್ಡಿದ ಆರೋಪಿಯನ್ನು ವಡೋದರ ನಿವಾಸಿ ವಿರಾಲ್ ಶಾ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಜರಾತ್ನಲ್ಲಿರುವ ಅವರ ನಿವಾಸದಿಂದ ಮುಂಬೈ ಪೊಲೀಸರ ಕ್ರೈಂ ಬ್ರಾಂಚ್ ಅವರನ್ನು ಇಂದು ಬೆಳಗ್ಗೆ ಬಂಧಿಸಿದ್ದಾರೆ.